ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ,

ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆಯ್ಕೆಯಾಗಿದ್ದಾರೆ.
ಬುಧವಾರ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.
ನಿಕಟಪೂರ್ವ ಅಧ್ಯಕ್ಷೆ ಸೀಮಾ ನಾಗರಾಜ್ ಅವರು ಡಾ.ದೀಪಕ್ ರೈ ಅವರಿಗೆ ಅಧಿಕಾರ ಹಸ್ತಾಂತರಿಸಿದರು.