ಸರ್ಪಂಗಳ ಸ್ಮಾರಕ ಪ್ರಶಸ್ತಿ ಪ್ರದಾನ.
ಉಡುಪಿ:ಜೀವ ವಿಮಾ ಅಧಿಕಾರಿಗಳಾಗಿ ನಿವೃತ್ತರಾಗಿದ್ದ,ಕಲಾಪ್ರೇಮಿ ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮರಣೆಯಲ್ಲಿ ಪ್ರತೀ ವರ್ಷ ಆಯೋಜಿಸುತ್ತಾ ಬಂದ ಸರ್ಪಂಗಳ ಯಕ್ಷೋತ್ಸವ,ಅಕ್ಟೋಬರ್ 27, ಭಾನುವಾರ ಯಕ್ಷಗಾನ ಕಲಾರಂಗದ ಐ.ವೈ.ಸಿ.ಸಭಾಂಗಣದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಇವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚೌಕಿ ಸಹಾಯಕರಾಗಿ ಐದು ದಶಕ ಸೇವೆ ಸಲ್ಲಿಸಿದ ಕಾಟುಕುಕ್ಕೆ ಗೋವಿಂದ ನಾಯ್ಕ ಇವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಈರ್ವರನ್ನು ಸನ್ಮಾನಿಸಿದರು.ಕಾರ್ಯಕ್ರಮದ ಪ್ರಾಯೋಕರಾದ ಡಾ. ನರೇಂದ್ರ ಶೆಣೈ, ಮತ್ತು ಡಾ.ಶೈಲಜಾ ಭಟ್ ಉಪಸ್ಥಿತರಿದ್ದರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ನಿರ್ವಹಿಸಿದ್ದರು. ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಕನಕಾಂಗಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

