ಚಿಟ್ಟಾಣಿ ಸಪ್ತಾಹ – ಸಮಾರೋಪ ಸಮಾರಂಭ
ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನವೆಂಬರ್ 5ರಂದು ಆರಂಭಗೊಂಡ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹದ ಸಮಾರೋಪ ಸಮಾರಂಭವು ನವೆಂಬರ್ 11ರಂದು ಜರಗಿತು.
ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಿರಿಯ ಸ್ತ್ರೀ ವೇಷಧಾರಿ ಎಂ. ಎ ನಾಯ್ಕರಿಗೆ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಯನ್ನು ಹಾಗೂ ಹವ್ಯಾಸಿ ಅರ್ಥಧಾರಿ, ಸಂಘಟಕ ನಾರಾಯಣ ಹೆಗಡೆಯವರಿಗೆ ಟಿ. ವಿ. ರಾವ್ ಪ್ರಶಸ್ತಿಯನ್ನು ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಿದರು.
ಪರ್ಯಾಯ ಪುತ್ತಿಗೆ ಮಠದ ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರತೀರ್ಥರು ಉಪಸ್ಥಿತರಿದ್ದರು.
ಮುಖ್ಯ ಅಭ್ಯಾಗತರಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಹೈಟೆಕ್ ಆಸ್ಪತ್ರೆಯ ನಿರ್ದೇಶಕ ಟಿ. ಎಸ್. ರಾವ್ ಭಾಗವಹಿಸಿದ್ದರು.
ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ವಂದಿಸಿದರು. ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

