ಯಕ್ಷಗಾನ ಕಲಾರಂಗ ಸಂಸ್ಥೆಯ ಆಜೀವ ಸದಸ್ಯರಾದ ಎನ್. ಸೀತಾರಾಮ ಶೆಟ್ಟಿ (70) ಇವರು ಅಲ್ಪಕಾಲದ ಅಸೌಖ್ಯದಿಂದ 17-11-2024ರಂದು ದೈವಾಧೀನರಾದರು.
ಬಿಲ್ಲಾಡಿಯ ಯಕ್ಷಕೃಪಾ ಕ್ಯಾಶ್ಯೂ ಇಂಡಸ್ಟ್ರೀಸ್ನ ಸಂಸ್ಥಾಪಕರಾದ ಇವರು ಯಕ್ಷಗಾನದ ಬಗ್ಗೆ ಅತೀವ ಒಲವುಳ್ಳವರಾಗಿದ್ದರು.
ಯಕ್ಷಗಾನ ಕಲಾರಂಗದ ಬಗ್ಗೆ ವಿಶೇಷೆ ಗೌರವಾದರಗಳನ್ನು ಹೊಂದಿದವರಾಗಿದ್ದ ಇವರು ವಿದ್ಯಾಪೋಷಕ್ಗೆ ನಿರಂತರವಾಗಿ ದೊಡ್ಡ ಮೊತ್ತದ ದೇಣಿಗೆ ನೀಡುತ್ತಾ ಬಂದಿದ್ದರು.
ನೂತನ ಕಟ್ಟಡದ ಉದ್ಘಾಟನೆಯ ಸಮಾರಂಭಕ್ಕೂ ಇವರ ಕೊಡುಗೆ ದೊಡ್ಡದು. ಯಕ್ಷಗಾನವನ್ನು ಪ್ರೀತಿಸುವ ಇವರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಸಂಖ್ಯೆಯ ಬಂಧುಬಾಂಧವರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

