ಕಾರ್ಕಳ: ತನ್ನ ಶೈಕ್ಷಣಿಕ ಹಂತದಿಂದ ಯಕ್ಷಗಾನ ಕಲೆಯ ಅಪಾರ ಆಸಕ್ತಿ ಹೊಂದಿ ಅಗ್ರಮಾನ್ಯ ಕಲಾವಿದರಿಂದ ನಾಟ್ಯಭ್ಯಾಸಗೈದು ವೇಷದಾರಿಯಾಗಿ ಮೆರೆದು ಜೊತೆಗೆ ಉತ್ತಮ ಪ್ರಸಂಗಕರ್ತರೂ ಆದ ಜೈನ ಕವಿ ಸಾಣೂರು ಶ್ರೀಧರ ಪಾಂಡಿಯವರ ಹದಿಮೂರನೇ “ಸಾವಿರದ ನೆನಪು” ಸಮಾರಂಭದಲ್ಲಿ ಯಕ್ಷಗಾನದ ಹಿರಿಯ ಕಲಾವಿದ ನಾಟ್ಯ ಗುರು ಕಾಂತಾವರ ಮಹಾವೀರ ಪಾಂಡಿಯವರಿಗೆ ಶ್ರೀಧರ ಪಾಂಡಿ ಸಂಸ್ಮರಣಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮೂಡಬಿದಿರೆಯ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ಶ್ರೀಧರ ಪಾಂಡಿಯವರ ಕಲಾಜೀವನದ ಆದರ್ಶಗಳನ್ನು ನೆನಪಿಸಿ ಆಶೀರ್ವಚನ ನೀಡಿದರು.
ಯಕ್ಷಗಾನ ವಿದ್ವಾಂಸ ರಾಘವ ನಂಬಿಯಾರ್ ಅದ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಚಾರ್ಯರಾದ ಕೆ.ಗುಣಪಾಲ ಕಡಂಬ, ಇರ್ವತ್ತೂರು ಉದಯ ಕುಮಾರ್ ಜೈನ್, ಹಾಗೂ ಮದ್ರಬೆಟ್ಟು ವಸಂತ ಅಧಿಕಾರಿ, ಜಗದೀಶ ಅಧಿಕಾರಿ, ಶ್ರೀಮತಿ ವಿಜಯ ಶ್ರೀಧರ ಪಾಂಡಿ, ಪುತ್ರಿ ಶ್ರೀಮತಿ ಶ್ರೀಶಾ, ಪುತ್ರ ಶ್ರೀಕಾಂತ್ ಕುಮಾರ್ ಉಪಸ್ಥಿತರಿದ್ದರು.
ಅಧ್ಯಾಪಕ, ವಾಗ್ಮಿ ಮುನಿರಾಜ ರೆಂಜಾಳ ಕಾರ್ಯಕ್ರಮ ನಿರ್ವಹಿಸಿದರು ಮೂಡಬಿದಿರೆಯ ಪ್ರಾಂಶುಪಾಲ ಪ್ರಭಾತ್ ಬಲ್ನಾಡ್ ವಂದಿಸಿದರು.
ನಂತರ ಪ್ರಸಿದ್ಧ ಕಲಾವಿದರಿಂದ ಗಾನ ವೈಭವ, ಬೀಷ್ಮ ವಿಜಯ ತಾಳಮದ್ದಳೆ ಜರಗಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

