ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಮನೆಯ ನಾಲ್ಕು ಜನರಿಗೆ ಗಾಯಗಳಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ 3 ಮನೆಗೆ ಬೆಂಕಿ ತಗುಲಿ ಅವುಗಳು ಭಾಗಶಃ ಸುಟ್ಟು ಹೋಗಿವೆ.
ಗ್ಯಾಸ್ ಸೋರಿಕೆಯಾಗಿ ಈ ಸಿಲಿಂಡರ್ ಸ್ಫೋಟಗೊಂಡಿವೆ ಎಂದು ಹೇಳಲಾಗುತ್ತಿದೆ. 3 ಮನೆಗಳಿಗೆ ಬೆಂಕಿ ತಗುಲಿದೆ. ಒಂದೇ ಕುಟುಂಬದ ನಾಲ್ಕು ಮಂದಿ ಗಾಯಗೊಂಡರು. ಈ ಘಟನೆ ನಡೆದದ್ದು ಡಿಜೆ ಹಳ್ಳಿಯ ಆನಂದ್ ಥಿಯೇಟರ್ ಸಮೀಪ.
ರೆಗ್ಯುಲೇಟರ್ ಹಳೆಯದಾಗಿದ್ದು ಡೇಟ್ ಬಾರ್ ಆಗಿತ್ತು ಎಂದು ತಿಳಿದುಬಂದಿದೆ. ಆದಕಾರಣ ಗ್ಯಾಸ್ ಲೀಕೇಜ್ ಆಗಿ ಶನಿವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿತು ಎಂದು ಹೇಳಲಾಗುತ್ತಿದೆ.
ಡಿಜೆ ಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
ಸಿಲಿಂಡರ್ ಸ್ಫೋಟಗೊಂಡ ಘಟನೆಯಲ್ಲಿ ಪಾನಿಪುರಿ ವ್ಯಾಪಾರಿ ನಾಜೀರ್, ಅವರ ಪತ್ನಿ ಕುಲ್ಸುಮ್ ಹಾಗೂ ದಂಪತಿಗಳ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರಗೆ ಸಾಗಿಸಲಾಯಿತು. ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂರು ಮನೆಗಳು ನೆಲಸಮವಾಗಿವೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

