ಕಾರಿಗೆ ಕಾರು ಢಿಕ್ಕಿಯಾಗಿ ಆಮೇಲೆ ಮರಕ್ಕೆ ಗುದ್ದಿ ನುಜ್ಜುಗುಜ್ಜಾದ ಘಟನೆಯಲ್ಲಿ ತಂದೆ, ಮಗ ದಾರುಣಬಾಗಿ ಮೃತ್ಯುವಶರಾಗಿದ್ದಾರೆ. ತಾಯಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಮೃತರಾದವರನ್ನು ತಂದೆ ರಾಕೇಶ್ (28), ಮಗ ಮೋಕ್ಷಿತ್ಗೌಡ (8) ಎಂದು ಗುರುತಿಸಲಾಗಿದೆ. ಈ ಭೀಕರ ಘಟನೆಯಲ್ಲಿ ರಾಕೇಶ್ನ ಪತ್ನಿ ಆಶಾ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಗೊಂಡಿರುವ ಆಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನದಲ್ಲಿ ಕಾರು ಬ್ರೇಕ್ ಫೇಲ್ ಆಗಿ ಮೊದಲು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿದೆ.ಕಾರಿಗೆ ಡಿಕ್ಕಿಯಾದ ಬಳಿಕ ಮರಕ್ಕೆ ಗುದ್ದಿ ಅಪ್ಪಚ್ಚಿಯಾದದ್ದರ ಪರಿಣಾಮ ತಂದೆ ಹಾಗೂ ಮಗ ನಿಧನರಾದ ದಾರುಣ ಘಟನೆ ಚನ್ನರಾಯಪಟ್ಟಣದ ಅಮಾನಿಕೆರೆ ಸಮೀಪ ನಡೆದಿದೆ.
ಕಾರು ಮರಕ್ಕೆ ಡಿಕ್ಕಿಯಾಗುವ ಮೊದಲೇ ಇನ್ನೊಂದು ಕಾರಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ ಬಳಿಕ ಮರಕ್ಕೆ ಡಿಕ್ಕಿಯಾಗಿ ಮುದ್ದೆಯಾಗಿದೆ. ಇದರಿಂದಾಗಿ ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ.
ಕುಟುಂಬ ಸದಸ್ಯರು ಕಾರಿನಲ್ಲಿ ಚನ್ನರಾಯಪಟ್ಟಣದಿಂದ ಶ್ರವಣೇರಿ ಗ್ರಾಮಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.
- ರಕ್ಷಣಾ ಸಚಿವಾಲಯದ ಅಧಿಕಾರಿಯಾಗಿದ್ದ ಹಾಗೂ ಮೂರು ತಿಂಗಳ ಗರ್ಭಿಣಿಯಾಗಿದ್ದ ಯುವತಿಯ ಅಕಾಲಿಕ ಸಾವು; ಅತ್ತೆ-ಮಾವಂದಿರ ವಿರುದ್ಧ ತನಿಖೆ
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ

