ಚಿಕ್ಕಮಗಳೂರು ಜಿಲ್ಲೆಯ ಹಳುವಳ್ಳಿಯ ಯಕ್ಷಗಾನ ಕಲಾವಿದ ವಸಂತ ಭಟ್ (64 ವರ್ಷ) ಇಂದು (02.12.2024) ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಹಳುವಳ್ಳಿಯ ಪ್ರಸಿದ್ಧ ಸ್ತ್ರೀವೇಷಧಾರಿ ಕೃಷ್ಣಯ್ಯರ ಪುತ್ರರಾದ ಇವರು ಅಮೃತೇಶ್ವರೀ, ಬಾಳೆಹೊಳೆ ಹಾಗೂ ದೀರ್ಘಕಾಲ ಗುತ್ಯಮ್ಮ ಮೇಳದಲ್ಲಿ ವೇಷಧಾರಿಯಾಗಿ ಕಲಾಸೇವೆ ಗೈದಿದ್ದಾರೆ.
ದೇವೇಂದ್ರ, ಶತ್ರುಘ್ನ, ಕಮಲಭೂಪ, ಹಂಸಧ್ವಜ, ಬಲರಾಮ, ಮೊದಲಾದ ರಾಜ ವೇಷದೊಂದಿಗೆ ಬಣ್ಣದ ವೇಷ ಮಾಡಿ ಜನ ಮೆಚ್ಚುಗೆ ಗಳಿಸಿದ್ದರು.
ಪ್ರಕೃತ ಗುತ್ಯಮ್ಮ ಮೇಳದ ಕಲಾವಿದರಾಗಿದ್ದ ವಸಂತ ಭಟ್ ಓರ್ವ ಸರಳ ಸಜ್ಜನಿಕೆಯ ಕಲಾವಿದರಾಗಿದ್ದರು. ಸಂಸ್ಥೆಯ ಬಗ್ಗೆ ಅತೀವ ಗೌರವಾಧಾರಗಳನ್ನು ಹೊಂದಿದ್ದ ಇವರು ಪತ್ನಿ, ಈರ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- ಅಮೆರಿಕದಲ್ಲಿ ಇಬ್ಬರು ಭಾರತೀಯ ಯುವತಿಯರ ಹತ್ಯೆ; ಅವರೊಂದಿಗೆ ವಾಸಿಸುತ್ತಿದ್ದ ಯುವತಿಯ ಬಂಧನ
- ಅತಿ ಭೀಕರ ಪ್ರವಾಹಕ್ಕೆ ಕಾರಣವೇನು? ನೇಪಾಳದ ಪ್ರವಾಹಕ್ಕೆ ಹಿಮನದಿ ಕುಸಿತ, ಭೂಕಂಪ ಕಾರಣವಾಯಿತೇ? ಇಲ್ಲಿದೆ ಅಸಲಿ ಕಾರಣ…
- ಗೋದಾವರಿ ನದಿಗೆ ಹಾರಿದ ಗಂಡ ಹೆಂಡತಿ – ಒಬ್ಬಂಟಿಯಾಗಿ, ಅನಾಥವಾಗಿ ಸೇತುವೆಯ ಮೇಲೆ ನಿಂತು ಅಳುತ್ತಿದ್ದ ಅವರ 3 ವರ್ಷದ ಮಗು
- ಸನ್ಯಾಸಿಯಾದ ಬಿಲಿಯನೇರ್ ಉತ್ತರಾಧಿಕಾರಿ –ಮಲೇಷ್ಯಾದ ಮೂರನೇ ಅತಿದೊಡ್ಡ ಶ್ರೀಮಂತ ಆನಂದ ಕೃಷ್ಣನ್ ಅವರ ಮಗ
- ತನ್ನ ತಂದೆಗೇ ತಿಂಗಳಿಗೆ 2 ಲಕ್ಷ ರೂಪಾಯಿ ವೇತನ ನೀಡುತ್ತಿರುವ 16 ವರ್ಷದ ಬಾಲಕ!

