ನಾಲ್ಕು ವರ್ಷದ ಬಾಲಕಿಯ ಖಾಸಗಿ ಅಂಗಗಳನ್ನು ಶಿಕ್ಷಕಿಯೊಬ್ಬರು ಗಾಯಗೊಳಿಸಿರುವ ಘಟನೆ ತಿರುವನಂತಪುರಂನಲ್ಲಿ ನಡೆದಿದೆ.
ಘಟನೆಯಲ್ಲಿ ಕಲ್ಲಟ್ಟುಮುಕ್ಕು ಆಕ್ಸ್ಫರ್ಡ್ ಶಾಲೆಯ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ ಎಂದು ಪ್ರಾಂಶುಪಾಲರು ಮಾಹಿತಿ ನೀಡಿದ್ದಾರೆ.
ಮಧ್ಯಾಹ್ನ ಶೌಚಾಲಯಕ್ಕೆ ಹೋಗಿದ್ದಕ್ಕೆ ಮಗುವನ್ನು ಬಳಿಕ ಶಿಕ್ಷಕಿ ನಿಂದಿಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಮಗುವಿನ ಅಜ್ಜಿ ಮಗುವಿನ ಬಟ್ಟೆಗಳನ್ನು ತೆಗೆದು ಪರಿಶೀಲಿಸಿದಾಗ ಮಗುವಿನ ಖಾಸಗಿ ಭಾಗದಲ್ಲಿ ಚಿಟಿಕೆಯಿಂದ ಗಾಯದ ಗುರುತು ಕಾಣಿಸಿಕೊಂಡಿದೆ.
ಆಗ ಅಜ್ಜಿ ಕೆಲಸಕ್ಕೆ ಹೋಗಿದ್ದ ಮಗುವಿನ ತಾಯಿಗೆ ಕರೆ ಮಾಡಿ ಬೆಳಗ್ಗೆ ಮಗುವಿಗೆ ಸ್ನಾನ ಮಾಡಿಸಿದಾಗ ಏನಾದರೂ ಗಾಯವಾಗಿದೆಯೇ ಎಂದು ಕೇಳಿದ್ದಾರೆ. ಹಾಗೇನೂ ಆಗಿಲ್ಲ ಎಂದು ತಾಯಿ ಹೇಳಿದಾಗ, ಅಜ್ಜಿ ಮಗುವಿನೊಂದಿಗೆ ಶಾಲೆಗೆ ಬಂದು ಏನಾಯಿತು ಎಂದು ವಿಚಾರಿಸಿದ್ದಾರೆ.
ಕುಟುಂಬಸ್ಥರ ಪ್ರಕಾರ, ಸಿಸಿಟಿವಿ ಪರಿಶೀಲನೆ ವೇಳೆ ಶಿಕ್ಷಕಿ ಮಗುವಿಗೆ ನೋವುಂಟು ಮಾಡುತ್ತಿರುವುದು ಕಂಡುಬಂದಿದೆ. ಬಳಿಕ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇಂದು ಬೆಳಗ್ಗೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ.
ಶಿಕ್ಷಕಿಉ ವಿರುದ್ಧ ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಕ್ಷ್ಯಾಧಾರ ಸಂಗ್ರಹಿಸಿದ ನಂತರ ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

