Thursday, May 14, 2026
Homeಯಕ್ಷಗಾನಕರ್ಗಲ್ಲು ವಿಶ್ವೇಶ್ವರ ಭಟ್‌ ಇವರಿಗೆ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ

ಕರ್ಗಲ್ಲು ವಿಶ್ವೇಶ್ವರ ಭಟ್‌ ಇವರಿಗೆ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ

ಉಡುಪಿಯ ಯಕ್ಷಗಾನ ಕಲಾರಂಗ ಯಕ್ಷಗಾನದಲ್ಲಿ ವಿಶಿಷ್ಟ ಸಾಧನೆಗೈದ ಸಾಧಕರಿಗೆ ನೀಡುವ ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ಸ್ಮರಣಾರ್ಥ ನೀಡುವ‘ ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಯಕ್ಷಗಾನ ಗುರು ಕರ್ಗಲ್ಲು ವಿಶ್ವೇಶ್ವರ ಭಟ್‌ ಆಯ್ಕೆಯಗಿದ್ದಾರೆ. ತೆಂಕುತಿಟ್ಟಿನ ಕುಣಿತದ ಸೂಕ್ಷ್ಮವನ್ನು ಬಲ್ಲ, ಅದನ್ನು ಅಷ್ಟೇ ಪರಿಣಾಮಕಾರಿಯಾಗಿ ತನ್ನ ಶಿಷ್ಯರಿಗೆ ಧಾರೆಯೆರೆಯುತ್ತಿರುವ ಇವರದ್ದು ವಿಶೇಷ ಪ್ರತಿಭೆ. ಹನ್ನೆರಡು ವರ್ಷ ಮೇಳದ ತಿರುಗಾಟ ಮಾಡಿ 1986ರಿಂದ ಯಕ್ಷಗಾನ ಅಧ್ಯಯನ ಅಧ್ಯಾಪನಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡವರು. ಪ್ರಶಸ್ತಿಯು ಪ್ರಶಸ್ತಿ ಪತ್ರ ಮತ್ತು 40000/- ರೂಪಾಯಿ ನಗದನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭ ಶ್ರೀಕೃಷ್ಣ ಮಠ ಪರ್ಯಾಯ ಶ್ರೀ ಅದಮಾರು ಮಠದ ಆಶ್ರಯದಲ್ಲಿ ಸೆಪ್ಟೆಂಬರ್ 26, ಭಾನುವಾರ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments