ಬೆಂಗಳೂರಿನ ಯಕ್ಷದೇಗುಲ ತಂಡ ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಕೋಟ ಹಂದೆ ಶ್ರೀ ವಿಷ್ಣುಮೂರ್ತಿ ವಿನಾಯಕ ದೇವಳದ ಪ್ರಾಂಗಣದಲ್ಲಿ ಆಯೋಜಿಸಿದ ರುರು-ಪ್ರಮದ್ವರ ಯಕ್ಷಗಾನ ಪ್ರಸಂಗದ ಪ್ರಥಮ ಪ್ರದರ್ಶನದಲ್ಲಿ ಪ್ರಸಂಗಕರ್ತ, ಯಕ್ಷಗಾನ ವಿದ್ವಾಂಸರಾದ ಸುಜಯೀಂದ್ರ ಹಂದೆ ಎಚ್ ಇವರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಬಹುಮೇಳಗಳ ಯಜಮಾನರಾದ ಪಿ. ಕಿಶನ್ ಹೆಗ್ಡೆ, ರಾಷ್ಟ್ರೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯಿರಿ, ಸಾಲಿಗ್ರಾಮ ಗುರುನರಸಿಂಹ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಕೆ. ಎಸ್. ಕಾರಂತ, ತ್ರಿಕಣ್ಣೇಶ್ವರಿ ಮಾಸ ಪತ್ರಿಕೆಯ ಸಂಪಾದಕರಾದ ತೇಜೇಶ್ವರ ರಾವ್, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಶ್ರೀಧರ ಹಂದೆ, ಕರ್ನಾಟಕ ಕಲಾದರ್ಶಿನಿ ಮಂಗಳೂರಿನ ಜನಾರ್ದನ ಹಂದೆ, ಹಂದೆ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ವೆಂಕಟರಮಣ ಸೋಮಾಯಾಜಿ, ಹಂದೆ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಅಮರ ಹಂದೆ, ಕೋಟ ಸುದರ್ಶನ ಉರಾಳ ಹಾಗೂ ಉಪನ್ಯಾಸಕ ರಾಘವೇಂದ್ರ ತುಂಗರು ಉಪಸ್ಥಿತರಿದ್ದರು.
- ಕೋಟ ಸುದರ್ಶನ ಉರಾಳ
ವಿ.ಸೂ: ಸನ್ಮಾನ ಕಾರ್ಯಕ್ರಮದ ಛಾಯಾಚಿತ್ರವನ್ನು ಲಗತ್ತಿಸಲಾಗಿದೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
