ಸಾಂದರ್ಭಿಕ ಚಿತ್ರ
ಶಿಕ್ಷಣದೊಂದಿಗೆ ಯಕ್ಷಗಾನ ಕಲಿಕೆ ಹಾಗೂ ಪ್ರದರ್ಶನಗಳಿಗೆ ಕಳೆದ 12 ವರ್ಷಗಳಿಂದ ವಿಶೇಷ ಪ್ರೋತ್ಸಾಹ ನೀಡುತ್ತಾ ಬಂದ ಮೂಡಬಿದ್ರೆಯ ಡಾ. ಎಂ. ಮೋಹನ್ ಆಳ್ವರ ನೇತೃತ್ವದ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಉಡುಪಿಯ ಯಕ್ಷಗಾನ ಕಲಾರಂಗ ನೀಡುವ ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಗೆ ಆಯ್ಕೆಯಾಗಿದೆ. ಉಭಯ ತಿಟ್ಟುಗಳಲ್ಲಿ ಆಸಕ್ತ ವಿದ್ಯಾರ್ಥಿಗಳಿಗೆ ಹಿಮ್ಮೇಳ ಹಾಗೂ ಮುಮ್ಮೇಳದ ಶಿಕ್ಷಣವನ್ನು ಮಾಸಿಕ ಶಿಷ್ಯವೇತನದೊಂದಿಗೆ ಕಲಿಸುತ್ತಾ, 2 ವರ್ಷಗಳ ಯಕ್ಷಗಾನ ಡಿಪ್ಲೊಮಾ ಕೋರ್ಸ್ ಅಳವಡಿಸಿದ ಏಕೈಕ ಶಿಕ್ಷಣ ಸಂಸ್ಥೆಯಾಗಿದೆ.
ಪ್ರಶಸ್ತಿಯು 50000/- ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ನವೆಂಬರ್ 28, 2021 ಭಾನುವಾರ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಅದಮಾರು ಶ್ರೀಗಳ ಹಾಗೂ ಪೇಜಾವರ ಶ್ರೀಗಳ ಉಪಸ್ಥಿತಿಯಲ್ಲಿ ಜರಗಲಿದೆ ಎಂಬುದಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
