Monday, October 7, 2024
Homeಯಕ್ಷಗಾನ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರಕಟ

‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ಪ್ರಕಟ

ಪ್ರತೀ ವರ್ಷ ಸಂಸ್ಥೆಯು ಹಿರಿಯ ಸಾಧಕರ ಸ್ಮರಣಾರ್ಥ ಮತ್ತು ಗೌರವಾರ್ಥ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ತೆಂಕು ಬಡಗಿನ ಈ ಕೆಳಗಿನ 17 ಹಿರಿಯ ಕಲಾವಿದರು ಆಯ್ಕೆಯಾಗಿದ್ದಾರೆ.


ಡಾ. ಬಿ.ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಸುರೇಂದ್ರ ಆಲೂರು, ಕುಂದಾಪುರ
ಪ್ರೊ. ಬಿ.ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ : ಶಾಂತಾರಾಮ ಆಚಾರಿ, ಬ್ರಹ್ಮಾವರ
ನಿಟ್ಟೂರು ಸುಂದರ ಶೆಟ್ಟಿ- ಮಹೇಶ ಡಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಸದಾಶಿವ ಕುಲಾಲ, ವೇಣೂರು
ಬಿ. ಜಗಜ್ಜೀವನ್‌ದಾಸ್ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಕೊರಗಪ್ಪ ರೈ, ಮಾಡಾವು
ಕೆ. ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಕೃಷ್ಣ ಜಿ. ನಾಯ್ಕ್, ಬೇಡ್ಕಣಿ
ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿ : ದಿನಕರ ಗೋಖಲೆ, ಬೆಳ್ತಂಗಡಿ
ಭಾಗವತ ನಾರ್ಣಪ್ಪ ಉಪ್ಪೂರ ಸ್ಮರಣಾರ್ಥ ಪ್ರಶಸ್ತಿ : ನಾರಾಯಣ ಶಬರಾಯ ಜಿ. ಎ., ಉಡುಪಿ
ದಶಾವತಾರಿ ಮಾರ್ವಿರಾಮಕೃಷ್ಣ ಹೆಬ್ಬಾರ್-ಭಾಗವತ ವಾದಿರಾಜ ಹೆಬ್ಬಾರ್ ಸ್ಮರಣಾರ್ಥ ಪ್ರಶಸ್ತಿ : ಬಿ. ಜನಾರ್ದನ ಗುಡಿಗಾರ, ಬೆಳ್ತಂಗಡಿ
ಶಿರಿಯಾರ ಮಂಜು ನಾಯ್ಕ್ ಸ್ಮರಣಾರ್ಥ ಪ್ರಶಸ್ತಿ : ಕೊಂಡದಕುಳಿ ರಾಮಚಂದ್ರ ಹೆಗಡೆ, ಕುಂಭಾಶಿ
ಕೋಟ ವೈಕುಂಠ ಸ್ಮರಣಾರ್ಥ ಪ್ರಶಸ್ತಿ : ಕೃಷ್ಣ ಮೊಗವೀರ, ಮೊಳಹಳ್ಳಿ
ಪಡಾರು ನರಸಿಂಹ ಶಾಸ್ತ್ರಿ ಸ್ಮರಣಾರ್ಥ ಪ್ರಶಸ್ತಿ : ಬೋಳ್ಗೆರೆ ಗಜಾನನ ಭಂಡಾರಿ, ಹೊನ್ನಾವರ
ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಪ್ರಶಸ್ತಿ : ವಿಶ್ವೇಶ್ವರ ರಾವ್, ಕಟೀಲು
ಮಲ್ಪೆ ಶಂಕರನಾರಾಯಣ ಸಾಮಗ ಸ್ಮರಣಾರ್ಥ ಪ್ರಶಸ್ತಿ : ನಿಟ್ಟೂರು ಸುಬ್ರಹ್ಮಣ್ಯ ಭಟ್, ಹೊಸನಗರ
ಐರೋಡಿ ರಾಮಗಾಣಿಗ ಸ್ಮರಣಾರ್ಥ ಪ್ರಶಸ್ತಿ : ಎ. ಸದಾನಂದ ಶೆಣೈ, ಕಮಲಶಿಲೆ
ಎಮ್. ತಿಮ್ಮಯ್ಯ ಸ್ಮರಣಾರ್ಥ ಪ್ರಶಸ್ತಿ : ಅಪ್ಪಕುಂಞ ಮಣಿಯಾಣಿ, ಕಾಸರಗೋಡು
ಶ್ರೀ ಕೋಳ್ಯೂರು ರಾಮಚಂದ್ರರಾವ್ ಗೌರವಾರ್ಥ ಪ್ರಶಸ್ತಿ : ರಾಜೀವ ಶೆಟ್ಟಿ, ಹೊಸಂಗಡಿ
ಶ್ರೀಮತಿ ಪ್ರಭಾವತಿ ವಿ. ಶೆಣೈ, ಶ್ರೀ ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿ : ಬಾಲಕೃಷ್ಣ ಶೆಟ್ಟಿ, ಮುಂಡಾಜೆ

ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 28 ಭಾನುವಾರ ಅಪರಾಹ್ನ 3 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪ್ರತಿಯೊಂದು ಪ್ರಶಸ್ತಿಯು 20,000 ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments