ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತೆಗೆಯ ಬೇಕು ಆ ನಿಟ್ಟಿನಲ್ಲಿ ಶ್ರೀ ಹುಲಿ ಸಿದ್ದೇಶ್ವರ ಯಕ್ಷನೈದಿಲೆ ಕಲಾ ಬಳಗದ ಸದಸ್ಯರು ಇಂತಹ ಕಾರ್ಯಾಗಾರವನ್ನು ಹಮ್ಮಿಕೊಂಡು ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಅವರಿಗೆ ಕಲಾ ಕೌಶಲ್ಯದ ಬಗ್ಗೆ ಆಸಕ್ತಿ ಹುಟ್ಟುವಂತೆ ಮಾಡುತ್ತಿದೆ ಎಂದು ಯಕ್ಷಗಾನ ಹಾಗೂ ರಂಗಭೂಮಿ ಕಲಾವಿದರಾದ ಡಾ.ರಾಧಾಕೃಷ್ಣ ಉರಾಳರು ಅಭಿಪ್ರಾಯ ಪಟ್ಟರು.
ಶ್ರೀ ಹುಲಿ ಸಿದ್ದೇಶ್ವರ ಯಕ್ಷನೈದಿಲೆ ಕಲಾ ಬಳಗ ಬೆಂಗಳೂರಿನ ವಿಶ್ವೇಶ್ವರಯ್ಯ ಬಡಾವಣೆಯ ಕಲಾಗುಡಿಯಲ್ಲಿ ಇತ್ತೀಚೆಗೆ ಹಮ್ಮಿಕೊಂಡ ಯಕ್ಷಗಾನ ಮುಖವರ್ಣಿಕೆಯ ಕಾರ್ಯಾಗಾರದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಈ ಒಂದುಕಾರ್ಯಾಗಾರದಲ್ಲಿ ವಿಶ್ವನಾಥ ಉರಾಳ, ಭರತ್ಗೌಡ ಹಾಗೂ ರಾಜೇಶ್ ಆಚಾರ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದರು.
ಮುಖವರ್ಣಿಕೆಯ ಕಾರ್ಯಾಗಾರದ ನಂತರ ಕಂಸವಧೆ ಯಕ್ಷಗಾನ ಪ್ರಸಂಗದ ಸಣ್ಣ ಸನ್ನಿವೇಶವನ್ನು ಈ ಒಂದು ಕಾರ್ಯಾಗಾರದಲ್ಲಿ ಪಾಲ್ಗೊಂಡ ಮಕ್ಕಳು ಅಭಿನಯಿಸಿ ಪ್ರಶಂಸೆಗೆ ಪಾತ್ರರಾದರು.
ಶ್ರೀ ಹುಲಿ ಸಿದ್ದೇಶ್ವರ ಯಕ್ಷನೈದಿಲೆ ಕಲಾ ಬಳಗದ ಅಧ್ಯಕ್ಷರಾದ ನಾಗರಾಜರವರು ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

