ಯಕ್ಷಗಾನ ಕಲಾವಿದ ಶಿವಮೊಗ್ಗ ಜಿಲ್ಲೆಯ ನರಸಿಂಹರಾಜಪುರ ನಿವಾಸಿ ಹೊಸಕೊಪ್ಪ ಶಿವರಾಮ ಶೆಟ್ಟಿ (69) 09-12-2021ರಂದು ನಿಧನ ಹೊಂದಿದರು. ಅವರು ಪತ್ನಿ ಹಾಗೂ ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ
ಗಂಭಿರ ಪುರುಷ ಪಾತ್ರಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದ ಶಿವರಾಮ ಶೆಟ್ಟಿಯವರು ತೆಂಕು-ಬಡಗು ಎರಡೂ ತಿಟ್ಟುಗಳಲ್ಲಿ ಸಮರ್ಥ ವೇಷಧಾರಿಯಾಗಿದ್ದರು. ಮಂದಾರ್ತಿ, ಸಾಲಿಗ್ರಾಮ, ಕಮಲಶಿಲೆ, ಗೋಳಿಗರಡಿ, ಮಾರಣಕಟ್ಟೆ, ನಾಗರಕೋಡಿಗೆ, ಸೌಕೂರು, ಹೊಸಳ್ಳಿ, ರಂಜದಕಟ್ಟೆ ಮೇಳಗಳಲ್ಲಿ ಕಲಾಸೇವೆಗೈದಿದ್ದರು.
ಕಟೀಲು ಮೇಳದಲ್ಲಿ ದೀರ್ಘಕಾಲ ಬಣ್ಣದ ವೇಷಧಾರಿಯಾಗಿ ಸೇವೆ ಗೈದ ಇವರು ಈ ವರ್ಷ ನಿವೃತ್ತರಾಗಿದ್ದರು. 2015ರಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಅವರಿಗೆ ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿ ನೀಡಿ ಗೌರವಿಸಿತ್ತು ಅವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
- 6th Standard, Social Studies, Civics, Chapter 21 – National Symbols and National Day Celebration
- 8th Standard, Social, Business Studies, Chapter 29 – EMERGENCE OF DIFFERENT BUSINESS ORGANISATIONS
- 6th Standard, Social, History, Chapter 16 – Indian Ideology and Bhakti cult
- 8th Standard, Mathematics, Chapter 12 – Factorisation
- 9th Standard, Social, History, CHAPTER 20 – REVOLUTION AND RISE OF NATION STATES
