ದಿ. ವೇಣೂರು ಸುಂದರ ಆಚಾರ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ವೇಣೂರಿನಲ್ಲಿ ಜುಲೈ 10 ರಂದು ನಡೆಸಲು ಉದ್ದೇಶಿಸಲಾಗಿದ್ದು ಸಮಿತಿಗೆ ಪದಾಧಿಕಾರಿಗಳನ್ನು ವೇಣೂರು ಯಾತ್ರಿ ನಿವಾಸದಲ್ಲಿ ಜರುಗಿದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ನಿವೃತ್ತ ಉಪ ಪ್ರಾಂಶುಪಾಲ ದಿವಾಕರ ಆಚಾರ್ಯ ಗೇರುಕಟ್ಟೆ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.
ರವೀಂದ್ರ ಆಚಾರ್ಯ ವೇಣೂರು (ಗೌರವಾಧ್ಯಕ್ಷರು), ಖಂಡಿಗ ಶ್ರೀಧರಾಚಾರ್ಯ (ಅಧ್ಯಕ್ಷರು), ಉಪಾಧ್ಯಕ್ಷರಾಗಿ ಸದಾಶಿವ ಕುಲಾಲ್ ವೇಣೂರು, ಅಶೋಕ ಆಚಾರ್ಯ ವೇಣೂರು, ಚಂದ್ರಶೇಖರ ಭಟ್ ಕೊಂಕಣಾಜೆ, ಸದಾಶಿವ ಆಚಾರ್ಯ ವೇಣೂರು, ಕಾರ್ಯದರ್ಶಿಯಾಗಿ ಪ್ರಕಾಶ್ ಪುರೋಹಿತ್ ಇವರನ್ನು ಆಯ್ಕೆ ಮಾಡಲಾಯಿತು.
ಸಹ ಕಾರ್ಯದರ್ಶಿಯಾಗಿ ಹರಿಶ್ಚಂದ್ರ ಆಚಾರ್ಯ, ಕೋಶಾಧಿಕಾರಿಯಾಗಿ ಸೀತಾರಾಮಾಚಾರ್ಯ ವೇಣೂರು ಇವರನ್ನು ಆಯ್ಕೆ ಮಾಡಲಾಯಿತು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
ಸಮಿತಿಯ ಸದಸ್ಯರಾಗಿ ಪ್ರಭಾಕರ ಆಚಾರ್ಯ, ಸತೀಶ್ ಆಚಾರ್ಯ, ಪ್ರಭಾಕರ ಪ್ರಭು, ಗಂಗಾಧರ್ ಆಚಾರ್ಯ, ಮಮತಾ. ಬಿ ಆಚಾರ್ ಮಂಗಳೂರು, ಚಂದ್ರಹಾಸ ಆಚಾರ್ಯ ಮತ್ತು ಸಲಹೆಗಾರರಾಗಿ ದಿವಾಕರ ಆಚಾರ್ಯ ಗೇರುಕಟ್ಟೆ, ಭಾಸ್ಕರ ಅಂಡಿAಜೆ, ಯಶೋಧರ ಆರಿಗ ವೇಣೂರು ಇವರನ್ನು ಆಯ್ಕೆ ಮಾಡಲಾಯಿತು.
ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಯಿತು. ಸದಾನಂದ ಆಚಾರ್ಯ ನೂರಾಲ್ ಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಸೀತಾರಾಮಾಚಾರ್ಯ ವೇಣೂರು ಸ್ವಾಗತಿಸಿ ಪ್ರಭಾಕರ ಪ್ರಭು ವಂದಿಸಿದರು.

