ಉಡುಪಿ : ಪೂರ್ಣಪ್ರಜ್ಷಾ ಅಡಿಟೋರಿಯಂನಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ್ದ ಬಡಗು ಯಕ್ಷಗಾನ ಪ್ರದರ್ಶನದ ಸಂದರ್ಭದಲ್ಲಿ ಹಿರಿಯ ಭಾಗವತ ವಿದ್ವಾನ್ ಗಣಪತಿ ಭಟ್ ಅವರು ರಚಿಸಿದ ಕೃತಿ ಯಕ್ಷಗಾನ ‘ಗಾನಸಂಹಿತೆ’ಯನ್ನು ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿ ಮಾತನಾಡುತ್ತಾ ಇದೊಂದು ಅಪೂರ್ವ ಕೃತಿಯಾಗಿದೆ, ಯಕ್ಷಗಾನ ಗುರುಗಳಿಗೆ, ಕಲಾವಿದರಿಗೆ ತುಂಬಾ ಉಪಯುಕ್ತ ಗ್ರಂಥ ಎಂದು ಅಭಿಪ್ರಾಯ ಪಟ್ಟರು.
ಸ್ವಾಮೀಜಿಯವರು ವಿದ್ವಾನ್ ಗಣಪತಿ ದಂಪತಿಗಳಿಗೆ ಅನುಗ್ರಹ ಮಂತ್ರಾಕ್ಷತೆ ನೀಡಿ ಹರಸಿದರು. ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಾರಾಯಣ ಎಮ್. ಹೆಗಡೆ ಕಾರ್ಯಕ್ರಮ ನಿರೂಪಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
