ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲಾದ್ಯಂತ ನಾಳೆ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಶುಕ್ರವಾರ ದಿನಾಂಕ 01.07.2022ರಂದು ರಜೆ ಘೋಷಿಸಲಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮಳೆಯ ರಭಸಕ್ಕೆ ಜಿಲ್ಲಾದ್ಯಂತ ನೆರೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ರಸ್ತೆಗಳೆಲ್ಲಾ ಜಲಾವೃತವಾಗಿದೆ.
ಟ್ರಾಫಿಕ್ ಜಾಮ್ ಮೊದಲಾದುವುಗಳಿಂದ ಸಾರಿಗೆ ಸಂಪರ್ಕ ಕಷ್ಟವಾಗುತ್ತಿದೆ. ಇದನ್ನು ಮನಗಂಡ ಜಿಲ್ಲಾಧಿಕಾರಿಯವರು ಈ ಆದೇಶ ಹೊರಡಿಸಿದ್ದಾರೆ. ನಾಳೆಯೂ ಮಳೆಯ ತೀವ್ರತೆ ಹೆಚ್ಚಾಗಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಗಾರು ಮಳೆ ರಾಜ್ಯದಲ್ಲಿ ಬಿರುಸಾಗುತ್ತಲಿದ್ದು ನಾಳೆ ದಕ್ಷಿಣ ಕನ್ನಡದಲ್ಲಿ ತೀವ್ರವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂಬ ಮುನ್ನೆಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ