Friday, September 20, 2024
Homeಸುದ್ದಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲಾದ್ಯಂತ ನಾಳೆ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ  ಶುಕ್ರವಾರ ದಿನಾಂಕ 01.07.2022ರಂದು ರಜೆ ಘೋಷಿಸಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ. ಈಗಾಗಲೇ ಮಳೆಯ ರಭಸಕ್ಕೆ ಜಿಲ್ಲಾದ್ಯಂತ ನೆರೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ರಸ್ತೆಗಳೆಲ್ಲಾ ಜಲಾವೃತವಾಗಿದೆ.

ಟ್ರಾಫಿಕ್ ಜಾಮ್ ಮೊದಲಾದುವುಗಳಿಂದ ಸಾರಿಗೆ ಸಂಪರ್ಕ ಕಷ್ಟವಾಗುತ್ತಿದೆ. ಇದನ್ನು ಮನಗಂಡ ಜಿಲ್ಲಾಧಿಕಾರಿಯವರು ಈ ಆದೇಶ ಹೊರಡಿಸಿದ್ದಾರೆ. ನಾಳೆಯೂ ಮಳೆಯ ತೀವ್ರತೆ ಹೆಚ್ಚಾಗಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಮಳೆ ರಾಜ್ಯದಲ್ಲಿ ಬಿರುಸಾಗುತ್ತಲಿದ್ದು ನಾಳೆ ದಕ್ಷಿಣ ಕನ್ನಡದಲ್ಲಿ ತೀವ್ರವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂಬ ಮುನ್ನೆಚ್ಚರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments