Friday, September 20, 2024
Homeಸುದ್ದಿಚಂದ್ರಶೇಖರ ಗುರೂಜಿ ಹತ್ಯೆ - ಹಂತಕ ಮಹಾಂತೇಶ್ ಪತ್ನಿ ವನಜಾಕ್ಷಿ ವಿಚಾರಣೆ

ಚಂದ್ರಶೇಖರ ಗುರೂಜಿ ಹತ್ಯೆ – ಹಂತಕ ಮಹಾಂತೇಶ್ ಪತ್ನಿ ವನಜಾಕ್ಷಿ ವಿಚಾರಣೆ

ಖ್ಯಾತ ವಾಸ್ತುತಜ್ಞ ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು  ಭೀಕರವಾಗಿ ಹತ್ಯೆಗೈಯಲಾಗಿದೆ. ಪ್ರಸಿದ್ಧ ವಾಸ್ತು ತಜ್ಞರಾದ ಚಂದ್ರ ಶೇಖರ ಗುರೂಜಿ ಅವರನ್ನು ಹುಬ್ಬಳ್ಳಿ ನಗರದ ಉಣಕಲ್ ನ ಪ್ರೆಸಿಡೆಂಟ್ ಹೊಟೇಲ್ ನ ರಿಸಪ್ಶನ್ ಬಳಿ ದುಷ್ಕರ್ಮಿಗಳು  ಇರಿದು ಕೊಲೆ ಮಾಡಿದ ಘಟನೆ ಇಂದು  ಮಂಗಳವಾರ ಮಧ್ಯಾಹ್ನ‌ ನಡೆದಿದೆ.

ಗುರೂಜಿಯವರ ಆಪ್ತರಾದ ಮಹಾಂತೇಶ್ ಶಿರೂರು, ಮಂಜುನಾಥ್  ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.  ಹಂತಕ ಮಹಾಂತೇಶ್ ನ ಪತ್ನಿ ವನಜಾಕ್ಷಿ ಯನ್ನು ವಿಚಾರಣೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments