ಕಾಣಿಯೂರು ಸಮೀಪದ ಬೈತಡ್ಕ ಗೌರಿಹೊಳೆ ದುರಂತದ ಬಗೆಗಿನ ಎಲ್ಲಾ ಊಹಾಪೋಹಗಳಿಗೂ ಈಗ ತೆರೆ ಬಿದ್ದಿದೆ. ಕಾರಿನಲ್ಲಿದ್ದ ಇಬ್ಬರ ಪೈಕಿ ಓರ್ವನ ಮೃತದೇಹ ಪತ್ತೆಯಾಗುವುದರ ಜೊತೆಗೆ ತನಿಖೆಯ ದಾರಿ ತಪ್ಪಿಸುವಂತೆ ಕಾಣಿಸುತ್ತಿದ್ದ ಹೇಳಿಕೆಗಳು ಸತ್ವವನ್ನು ಕಳೆದುಕೊಂಡಿದೆ.
ಇಬ್ಬರಲ್ಲಿ ಓರವನ ಮೃತದೇಹ ಇಂದು ಬೆಳಗ್ಗೆ 8 ಘಂಟೆಗೆ ಪತ್ತೆಯಾಗಿದೆ. ಬೈತಡ್ಕ ಗೌರಿಹೊಳೆ ಸೇತುವೆಯಿಂದ ಸುಮಾರು 500 ಮೀಟರ್ ದೂರದಲ್ಲಿ ಹೊಳೆಗೆ ಬಿದ್ದಿದ್ದ ಭಾರೀ ಗಾತ್ರದ ಮರವೊಂದರಲ್ಲಿ ಸಿಕ್ಕಿಹಾಕಿಕೊಂಡ ರೀತಿಯಲ್ಲಿ ಪತ್ತೆಯಾದ ಮೃತದೇಹ ಇಬ್ಬರಲ್ಲಿ ಯಾರದೆಂದು ಗುರುತುಹಿಡಿದ ನಂತರವೇ ತಿಳಿಯಬಹುದಾಗಿದೆ.
ನಿನ್ನೆಯ ವರೆಗೆ ಹೋಳೆ ತುಂಬಿ ಹರಿಯುತ್ತಿದ್ದುದರಿಂದ ಆ ಮರದ ದಿಮ್ಮಿ ಕಾಣಿಸುತ್ತಿರಲಿಲ್ಲ. ಇಂದು ಮಳೆಯ ಜೊತೆಗೆ ಹೊಳೆಯ ನೀರಿನ ಮಟ್ಟವೂ ಕಡಿಮೆಯಾಗಿದೆ. ಆದ್ದರಿಂದ ಆ ಮರದ ದಿಮ್ಮಿಯಲ್ಲಿ ನೇತಾಡುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.
ಮರಕ್ಕಡದ ಜೇಡರಕೇರಿ ಮಂಜಯ್ಯ ಆಚಾರ್ಯರ ಮನೆಯ ಬಳಿ ಹರಿಯುತ್ತಿದ್ದ ಹೊಳೆಯಲ್ಲಿ ಇದ್ದ ಮರದ ಕೊಂಬೆಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊಲೀಸ್ ಇಲಾಖೆಯವರು ಆಗಮಿಸಿದ್ದು ಮೃತದೇಹವನ್ನು ಮೇಲೆತ್ತಿ ಶವಪರೀಕ್ಷೆಗೆ ಕಳುಹಿಸುವ ಕಾರ್ಯ ಇನ್ನಷ್ಟೇ ಆಗಬೇಕಾಗಿದೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ