ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಪುತ್ತೂರಿನ ದಂಪತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇವರು ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ.
ಪುತ್ತೂರಿನ ಸರ್ವೇ ಗ್ರಾಮದ ಬಾವಿಕಟ್ಟೆ ನಿವಾಸಿಗಳಾದ ಪ್ರಮೋದ್ ಮತ್ತು ಆತನ ಪತ್ನಿ ಸುಮಾ ಎಂಬವರನ್ನು ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ನೇತೃತ್ವದ ತಂಡ ಬಂಧಿಸಿದೆ. ಇವರು ವಿಟ್ಲ ಸಮೀಪದ ದಂಬೆತಾರು ವಿನಯಚಂದ್ರ ನಾಯಕ್ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.
ಮನೆಯ ಬೆಡ್ ರೂಮ್ ನ ಕಪಾಟಿನಲ್ಲಿದ್ದ ಚಿನ್ನದ ಬ್ರಾಸ್ ಲೈಟ್, ಚಿನ್ನದ ಲಕ್ಷ್ಮಿ ಸರ, ಚಿನ್ನದ ಪದಕ ಸಹಿತ ಸರ, ಚಿನ್ನದ ಲಕ್ಷ್ಮಿ ಪದಕ ಸಹಿತ ಸರ, 3 ಚಿನ್ನದ ಉಂಗುರಗಳು, ಚಿನ್ನಾಭರಣಗಳು ಸೇರಿದಂತೆ ಒಟ್ಟು 98 ಗ್ರಾಂ ಆಭರಣಗಳನ್ನು ಕಳವು ಮಾಡಿದ್ದರು.
ಚಿನ್ನಾಭರಣಗಳ ಒಟ್ಟು ಮೌಲ್ಯ ಅಂದಾಜು 1,50,000/ ರೂಪಾಯಿ ಎಂದು ತಿಳಿದುಬಂದಿದೆ.
ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದು, ಕಳವಾಗಿದ್ದ 98 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರನ್ನೂ ವಶಕ್ಕೆ ಪಡೆದುಕೊಂಡು ಬಂಧಿತರನ್ನು ಹೆಚ್ಚಿನ ವಿಚಾರಣೆಗೈಯಲಾಗುತ್ತಿದೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

