ದಿನಾಂಕ 21/07/2022 ರ ಗುರುವಾರ ಕೈಕಂಬ ಜಂಕ್ಷನ್ ರಸ್ತೆ ಪಕ್ಕದಲ್ಲಿ, ಅನಾಥ ಶವಯೊಂದು ಇರುವ ಸುದ್ದಿಯನ್ನು ತಿಳಿದ, ಮೋದಿ ಪರಿವಾರ್ ರಿಕ್ಷಾ ಚಾಲಕರು ತಕ್ಷದಲ್ಲೆ ಬಜಪೆ ಪೋಲಿಸ್ ಠಾಣೆಗೆ ವಿಷಯವನ್ನು ತಿಳಿಸಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ನಂತರದಲ್ಲಿ,ಅನಾಥ ಶವವನ್ನು ಪೋಲಿಸರ ಸಮ್ಮುಖದಲ್ಲಿ, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸಾಗಿಸುವಲ್ಲಿಯೂ ಸಹಕಾರವನ್ನು ನೀಡಿರುತ್ತಾರೆ.
ತುರ್ತು ಪರಿಸ್ಥಿತಿಯಲ್ಲಿ ಕ್ಷಣಾರ್ದದಲ್ಲೇ ಅಂಬುಲೆನ್ಸ್ ಸೇವೆಯನ್ನು ನೀಡುತ್ತಿರುವ ಮೋದಿ ಪರಿವಾರ್ ರಿಕ್ಷಾ ಚಾಲಕರು ಗುರುಪುರ ಕೈಕಂಬದ ಆಟೋ ಚಾಲಕರಿಗೆ ಸಾರ್ವಜನಿಕರ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನ ಸಮರ್ಪಿಸುತಿದ್ದೇವೆ.
ಗುರುಪುರ ಕೈಕಂಬದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಅಂಬುಲೆನ್ಸ್ ಕೊರತೆಯನ್ನು ಮನಗಂಡ,ಕೈಕಂಬ ಆಟೋ ಚಾಲಕರು ಅನೇಕ ಕೊಡುಗೈ ದಾನಿಗಳ ಹಾಗು ಸಾರ್ವಜನಿಕ ಸಹಕಾರದಲ್ಲಿ ಎರಡು ಅಂಬುಲೆನ್ಸನ್ನು ಲೋಕಾರ್ಪಣೆ ಮಾಡಿದ್ದು,ಸಾರ್ವಜನಿಕರಿಗೆ ತುಂಬಾ ಸಹಕಾರಿಯಾಗುತ್ತಿದೆ.
ಈಗಾಗಲೇ ತುರ್ತು ಪರಿಸ್ಥಿತಿಯಲ್ಲಿ ತಕ್ಷಣದ ಸೇವೆಗಳನ್ನು ಮೋದಿ ಪರಿವಾರ್ ರಿಕ್ಷಾ ಚಾಲಕರು ಗುರುಪುರ ಕೈಕಂಬ ಇವರು ನೀಡುತ್ತಿದ್ದು,ಸಾರ್ವಜನಿಕರ ಮೆಚ್ಚುಗೆಯನ್ನು ಪಡೆಯುತ್ತಿದೆ.
ತುರ್ತು ಪರಿಸ್ಥಿತಿಗಳಲ್ಲಿ ಕರೆ ಮಾಡಿದಾಗ ಹಿಂದೆ ಮುಂದೆ ನೋಡದೆ ತಕ್ಷಣದಲ್ಲೇ ಬರುವ ಆಟೋ ಚಾಲಕರಿಗೆ ಕೋಟಿ ನಮನಗಳನ್ನು ಸಲ್ಲಿಸುತ್ತ,ನಿಮ್ಮ ಅಂಬುಲೆನ್ಸ್ ಸೇವೆಯೂ ಮುಂದೆಯೂ ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ನೆರವಾಗಲಿ, ದೇವರು ತಮಗೆ ಸಕಲೈಶ್ವರ್ಯಗಳನ್ನು ದಯಪಾಲಿಸಲಿ, ಸಾರ್ವಜನಿಕ ಸೇವೆಗಳನ್ನೂ ನಿರಂತರವಾಗಿ ಮಾಡುವ ಶಕ್ತಿಯನ್ನು ಭಗವಂತನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ.
ಬರಹ: ಸಾರ್ವಜನಿಕ ಬಂಧುಗಳು, ಗುರುಪುರ,ಕೈಕಂಬ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

