ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ದ.ಕ.ಜಿ.ಪಂ.ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಮತ್ತು ದ.ಕ.ಜಿ.ಪಂ.ಸರಕಾರಿ ಪ್ರೌಢ ಶಾಲೆ ನ್ಯೂಪಡ್ಪು, ಹರೇಕಳ ಇದರ ಆಶ್ರಯದಲ್ಲಿ ಜುಲೈ23ರಂದು ಮಂಗಳೂರು ವಿಶ್ವವಿದ್ಯಾನಿಲಯದ ಒಳಾಂಗಣ ಕ್ರೀಡಾಂಗಣ, ಕೊಣಾಜೆ ಇಲ್ಲಿ ನಡೆದ ಜಿಲ್ಲಾಮಟ್ಟದ ಪ್ರಾಥಮಿಕ U-14 ವಯೋಮಾನ ವರ್ಗದ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನ ಗಳಿಸಿರುತ್ತದೆ.
ಈ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಸಮನ್ವಿತಾ. ಕೆ(ವಿನ್ಯಾಸ್ ಕನ್ಸ್ಟ್ರ ಕ್ಷಷನ್ ಮಾಲಕ ಬಪ್ಪಳಿಗೆಯ ಕಿಶೋರ್ ಕುಮಾರ್ ಮತ್ತು ರೂಪಶ್ರೀ. ಕೆ. ರವರ ಪುತ್ರಿ), ಡಿ. ಹರ್ಷ (ಚಿಕ್ಕಪುತ್ತೂರಿನ ಶಿವಕುಮಾರ್ ಮತ್ತು ಎಸ್. ಪೋನ್ನಿ ಅವರ ಪುತ್ರಿ) ಇವರುಗಳು ಪುತ್ತೂರು ತಾಲೂಕನ್ನು ಪ್ರತಿನಿಧಿಸಿರುತ್ತಾರೆ.
ಇದರಲ್ಲಿ 8ನೇ ತರಗತಿಯ ಸಮನ್ವಿತಾ. ಕೆ ಇವರು ಅಕ್ಟೋಬರ್ ದಲ್ಲಿ ಚಾಮರಾಜನಗರ, ಮೈಸೂರು ಜಿಲ್ಲೆ ಇಲ್ಲಿ ನಡೆಯುವ ವಿಭಾಗಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಜಿಲ್ಲೆಯನ್ನು ಪ್ರತಿನಿಧಿಸಿ, ಭಾಗವಹಿಸಲಿದ್ದಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
