ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ರಾಜರಾಜೇಶ್ವರಿ ಪ್ರೌಢ ಶಾಲೆ, ಪೊಳಲಿ ಇಲ್ಲಿ ದಿನಾಂಕ 30-07-2022ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಈ ಕೆಳಗಿನ 3 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅದರಲ್ಲಿ ಪ್ರೌಢ ಶಾಲಾ ವಿಭಾಗದ ಹುಡುಗರು- ಪ್ರಣೀಲ್ ರೈ, 10ನೇ ತರಗತಿ( ಪ್ರಕಾಶ್ ಕುಮಾರ್ ರೈ ಮನವಳಿಕೆ ಗುತ್ತು ಮತ್ತು ಸತ್ಯಲತ ಪ್ರಕಾಶ್ ಇವರ ಪುತ್ರ)-ಪ್ರಥಮ ಸ್ಥಾನ,
ಧನುಷ್ರಾಮ್, 10ನೇ ತರಗತಿ (ಕಿಯೋನಿಕ್ಸ್ ನ ಮಾಲಕ ದಿನೇಶ್ ಪ್ರಸನ್ನ ಮತ್ತು ಉಮಾ.ಡಿ.ಪ್ರಸನ್ನ ಇವರ ಪುತ್ರ) – ದ್ವಿತೀಯ ಸ್ಥಾನ
ಹಾಗೂ ಪ್ರೌಢ ಶಾಲಾ ವಿಭಾಗದ ಹುಡುಗಿಯರ ವಿಭಾಗದಲ್ಲಿ ಸುಶ್ಮಿತ.ಟಿ.ರಾವ್, 9ನೇ ತರಗತಿ, (ತ್ರಿವಿಕ್ರಮ ರಾವ್ ಮತ್ತು ಶಾರದಾ ಇವರ ಪುತ್ರಿ) – ಪಂಚಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ