ದಕ್ಷಿಣ ಕನ್ನಡದಲ್ಲಿ ಹೊಸ ಸಂಚಾರೀ ನಿಯಮ ಹೊಸ ಸಂಚಾರೀ ನಿಯಮ ಜಾರಿಗೆ ತರಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಪುರುಷರಿಗೆ ಹಿಂದುಗಡೆ ಕುಳಿತುಕೊಳ್ಳಲು ಅವಕಾಶ ಇಲ್ಲ.
ಆದರೆ ಹಿರಿಯ ನಾಗರಿಕರು, ಮಕ್ಕಳು ಮತ್ತು ಮಹಿಳೆಯರಿಗೆ ಅವಕಾಶ ಇರುತ್ತದೆ.
ಅಂದರೆ 18 ವರ್ಷದ ಕೆಳಗಿನವರು, ಮಹಿಳೆಯರು ಮತ್ತು ಹಿರಿಯ ನಾಗರಿಕರು ಹಿಂದುಗಡೆ ಕುಳಿತು ಪ್ರಯಾಣಿಸಬಹುದು.
“ಇತ್ತೀಚಿಗೆ ನಡೆದ ಅಪರಾಧ ಕೃತ್ಯಗಳಲ್ಲಿ ಹಿಂದುಗಡೆ ಸವಾರರೇ ಕೃತ್ಯ ಎಸಗಿರುವುದನ್ನು ಗಮನದಲ್ಲಿರಿಸಿ ಈ ಬದಲಾವಣೆ ಮಾಡಲಾಗಿದೆ. ಈ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗುವುದು.
ಕೆಲವು ಇತರ ರಾಜ್ಯಗಳಲ್ಲಿ ಈ ಕ್ರಮ ಈಗಾಗಲೇ ಜಾರಿಯಲ್ಲಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದನ್ನು ಜಾರಿಗೊಳಿಸಲಾಗುತ್ತದೆ. ವಯಸ್ಕ ಪುರುಷರಿಗೆ ಮಾತ್ರ ನಿರ್ಬಂಧ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ