ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಯಕ್ಷ ಭಾರತಿ ( ರಿ) ಕನ್ಯಾಡಿ ವತಿಯಿಂದ ಅಭಿನಂದಿಸಲಾಯಿತು.
ಯಕ್ಷ ಭಾರತಿ ಸಂಸ್ಥೆಯ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಪೂರ್ವಕವಾಗಿ ಹೆಗ್ಗಡವರಿಗೆ ನೀಡಲಾಯಿತು.
ಯಕ್ಷ ಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ವಿಶ್ವಸ್ಥರಾದ ವಿದ್ಯಾಕುಮಾರ್ ಕಾಂಚೊಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಯಕ್ಷ ಭಾರತಿ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಸಹಯೋಗದಲ್ಲಿ ನಡೆಸಲಾಗುವ ಆರೋಗ್ಯ ತಪಾಸಣಾ ಶಿಬಿರ , ಮಂಗಳೂರಿನ ರೆಡ್ ಕ್ರಾಸ್ ಸಂಸ್ಥೆ ಸಹಕಾರದಲ್ಲಿ ರಕ್ತದಾನ ಶಿಬಿರ ,ಯಕ್ಷ ಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾನಿಧಿ ವಿತರಣೆ, ಸೇವಾ ಗೌರವ ಸನ್ಮಾನ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಪ್ರದರ್ಶನ ಬಗ್ಗೆ ತಿಳಿದು ಹೆಗ್ಗಡಯವರು ಸಂತಸ ವ್ಯಕ್ತಪಡಿಸಿದರು.
- ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ 15 ಲಕ್ಷ ರೂಪಾಯಿಗಳ ಕೊಡುಗೆ
- ಬೈರುತ್ ವೈಮಾನಿಕ ದಾಳಿಯಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಹತ್ಯೆ – ಇಸ್ರೇಲ್ ಅಧಿಕೃತ ಹೇಳಿಕೆ
- ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ಪುತ್ತೂರಿನಲ್ಲಿ ದೂರು ದಾಖಲು – ಹಿಂದೂ ಧರ್ಮಕ್ಕೆ ಅವಮಾನ ಎಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹ
- 60ರ ಹರೆಯದ ಸಂಭ್ರಮದಲ್ಲಿರುವ ಸುಣ್ಣಂಬಳ ವಿಶ್ವೇಶ್ವರ ಭಟ್ಟರಿಗೆ ಇಂದು ಕಟೀಲು ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ ಸನ್ಮಾನ
- 30 ವರ್ಷಗಳ ಹಿಂದೆ ನಾಪತ್ತೆಯಾಗಿದ್ದವನ ಅಸ್ಥಿಪಂಜರ ಅಂಗಳದಲ್ಲಿ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆ, ಉತ್ಖನನದ ನಂತರ ಬೆಚ್ಚಿ ಬಿದ್ದ ಪೊಲೀಸರು