ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಇವರನ್ನು ಯಕ್ಷ ಭಾರತಿ ( ರಿ) ಕನ್ಯಾಡಿ ವತಿಯಿಂದ ಅಭಿನಂದಿಸಲಾಯಿತು.
ಯಕ್ಷ ಭಾರತಿ ಸಂಸ್ಥೆಯ ಎಂಟನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವ ಪೂರ್ವಕವಾಗಿ ಹೆಗ್ಗಡವರಿಗೆ ನೀಡಲಾಯಿತು.
ಯಕ್ಷ ಭಾರತಿ ಅಧ್ಯಕ್ಷರಾದ ರಾಘವೇಂದ್ರ ಬೈಪಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ವಿಶ್ವಸ್ಥರಾದ ವಿದ್ಯಾಕುಮಾರ್ ಕಾಂಚೊಡು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಯಕ್ಷ ಭಾರತಿ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಸಹಯೋಗದಲ್ಲಿ ನಡೆಸಲಾಗುವ ಆರೋಗ್ಯ ತಪಾಸಣಾ ಶಿಬಿರ , ಮಂಗಳೂರಿನ ರೆಡ್ ಕ್ರಾಸ್ ಸಂಸ್ಥೆ ಸಹಕಾರದಲ್ಲಿ ರಕ್ತದಾನ ಶಿಬಿರ ,ಯಕ್ಷ ಭಾರತಿ ಪ್ರಶಸ್ತಿ ಪ್ರದಾನ, ವಿದ್ಯಾನಿಧಿ ವಿತರಣೆ, ಸೇವಾ ಗೌರವ ಸನ್ಮಾನ, ಯಕ್ಷಗಾನ ತಾಳಮದ್ದಳೆ, ಯಕ್ಷಗಾನ ಪ್ರದರ್ಶನ ಬಗ್ಗೆ ತಿಳಿದು ಹೆಗ್ಗಡಯವರು ಸಂತಸ ವ್ಯಕ್ತಪಡಿಸಿದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

