ನಮ್ಮ ದೇಶಾದ್ಯಂತ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ನಡೆಯುತ್ತಿರುವ ಈ ವಿಶೇಷ ಸಂದರ್ಭದಲ್ಲಿ, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ವಿವೇಕಾನಂದ ಸ್ಕೌಟ್ಸ್ ಮತ್ತು ನಿವೇದಿತಾಗೈಡ್ಸ್ ದಳದ ಸದಸ್ಯರು, ಕೊಡಂಗೆ ತರವಾಡು ಶ್ರೀ ಜಯರಾಮ ನಾಯ್ಕ್ ಇವರ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ “ನಮ್ಮ ಚಿತ್ತ ಕೃಷಿಯತ್ತ” ಎಂಬ ಮಾತಿನೆಡೆಗೆ ಹೆಜ್ಜೆ ಇರಿಸಿದರು.
ಶಿಕ್ಷಕ ಶಿಕ್ಷಕೇತರ ವೃಂದದವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿಲಾಗಿತ್ತು.
ಪ್ರಾರಂಭದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಯವರು ದೀಪ ಬೆಳಗಿಸಿ ನಾಟಿಗೆ ಚಾಲನೆ ನೀಡಿ, ಕೃಷಿ ಪ್ರಧಾನವಾದ ನಮ್ಮದೇಶದಲ್ಲಿ ಈಗೀಗ ಕೃಷಿಯ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಆಸಕ್ತಿ ಮೂಡಿಸಿಕೊಳ್ಳುತ್ತಿರುವುದು ಸಂತಸದ ವಿಷಯ ಎಂದರು.
ಕೊಡಂಗೆ ಕುಟುಂಬದ ಹಿರಿಯರಾದ ಶ್ರೀ ಜಯರಾಮ ನಾಯ್ಕ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿವೇಕಾನಂದ ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ ಈ ಕಾರ್ಯದಲ್ಲಿ ಸ್ಥಳೀಯರ ಜೊತೆಗೆ ಶ್ರೀ ರೂಪೇಶ್, ಶ್ರೀಮತಿ ಜ್ಯೋತಿ ರೂಪೇಶ್, ಕುಮಾರಿ ಸಾನ್ವಿ ಇವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಗೆ ಪಾನೀಯ ಮತ್ತು ಉಪಾಹಾರದ ವ್ಯವಸ್ಥೆ ಮಾಡಿ ಸಹಕರಿಸಿದರು.

- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

