ಸಿರಿಬಾಗಿಲು- ಗಡಿನಾಡು ಕಾಸರಗೋಡಿನ ಪ್ರಸಿದ್ಧ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಮುಂದಿನ ಸಾರ್ವಜನಿಕ ಲೋಕಾರ್ಪಣೆಯ ವರೇಗೆ ತಿಂಗಳ ಎರಡನೇ ಶನಿವಾರ ಮತ್ತು ಭಾನುವಾರ ಕಲಾ- ಸಾಂಸ್ಕೃತಿಕ- ಸಾಹಿತ್ಯ ವೈಭವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಆಜಾದಿ ಕಾ ಅಮೃತ್ ಮಹೋತ್ಸವ್ (ಸ್ವಾತಂತ್ರ್ಯದ ಅಮೃತ ಮಹೋತ್ಸವ) ಕಾರ್ಯಕ್ರಮದ ಅಂಗವಾಗಿ ದಿನಾಂಕ 13.08.2022ರ ಶನಿವಾರ ಮತ್ತು 14.08.2022ರ ಆದಿತ್ಯವಾರ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಕಲಾ, ಸಾಂಸ್ಕೃತಿಕ, ಸಾಹಿತ್ಯ ವೈಭವದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
13.08.2022 ರಂದು ಅಪರಾಹ್ನ 3 ಘಂಟೆಗೆ ‘ಪಾರ್ಥ ಸಾರಥ್ಯ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ. 14.08.2022ರ ಆದಿತ್ಯವಾರ ಬೆಳಗ್ಗೆ 10 ಘಂಟೆಯಿಂದ ಕವಿಗೋಷ್ಠಿ ಮತ್ತು ಅಪರಾಹ್ನ 3 ಘಂಟೆಗೆ ‘ಶ್ರೀರಾಮ ದರ್ಶನ’ ತಾಳಮದ್ದಳೆ ನೆರವೇರಲಿದೆ.
ಎಲ್ಲಾ ಕಾರ್ಯಕ್ರಮಗಳು SV VISION LIVE ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರ ಆಗಲಿದೆ. ವಿವರಗಳಿಗೆ ಕರಪತ್ರದ ಚಿತ್ರವನ್ನು ನೋಡಿ

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

