ಪುತ್ತೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು 97% ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ.
ಜುಲೈ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 276 ವಿದ್ಯಾರ್ಥಿಗಳು ಹಾಜರಾಗಿದ್ದು 264 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಕಾಲೇಜಿನ ವಿಭಾಗವಾರು ಫಲಿತಾಂಶಗಳ ಪೈಕಿ ಕಂಪ್ಯೂಟರ್ ಸೈನ್ಸ್-100%, ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್-99%, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ-98% ಹಾಗೂ ಸಿವಿಲ್ ಇಂಜಿನಿಯರಿಂಗ್ ವಿಭಾಗ-89% ಫಲಿತಾಂಶವನ್ನು ದಾಖಲಿಸಿವೆ.
ಎಲ್ಲಾ ಅರ್ಹ ವಿದ್ಯಾರ್ಥಿಗಳು ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದು, ಕೆಲವು ವಿದ್ಯಾರ್ಥಿಗಳು ಈಗಾಗಲೇ ಉದ್ಯೋಗಕ್ಕೆ ಸೇರಿಕೊಂಡಿದ್ದಾರೆ.
ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಉತ್ತಮ ಫಲಿತಾಂಶವನ್ನು ಪಡೆದುಕೊಂಡ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ. ಕೆ ತಿಳಿಸಿದ್ದಾರೆ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ