ಸ್ವಾತಂತ್ರ್ಯ75ನೇ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದ ಶ್ರೀ ಕುಮಾರ್.ಕೆ.ಎ ಇವರು ಹೇಳಿದರು.
ಅವರು ದಿನಾಂಕ 15-08-2022ನೇ ಸೋಮವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ 76ನೇ ವರ್ಷದ ಸ್ವಾತಂತ್ರ್ಯಯ ದಿನಾಚರಣೆಯ ಸಂದರ್ಭದಲ್ಲಿ ಧ್ವಜಾರೋಹಣಗೈದು, ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ಶಿವಪ್ರಕಾಶ್.ಎಂ, ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿ, ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿ0ದ “ಅಮೃತ ನಡಿಗೆ ದೇಶದ ಕಡೆಗೆ” ಎನ್ನುವ ಧ್ಯೇಯ ವಾಕ್ಯದೊಂದಿಗೆ ವಿವೇಕಾನಂದ ಸಮೂಹ ಶಿಕ್ಷಣ ಸಂಸ್ಥೆಗಳ 8000 ವಿದ್ಯಾರ್ಥಿಗಳ ಜಾಥಾದ ಮೂಲಕ ವಿವೇಕಾನಂದ ವಿದ್ಯಾವರ್ಧಕ ಸಂಘ ವಿನೂತನವಾಗಿ ಹಮ್ಮಿಕೊಂಡಿತ್ತು. ಇಂದು 75ನೇ ಅಮೃತ ಮಹೋತ್ಸವವನ್ನು ಆಚರಿಸುತ್ತಿದ್ದು, ಮುಂದಿನ 25 ವರ್ಷದಲ್ಲಿ ಶತಮಾನೋತ್ಸವನ್ನು ಅಚರಿಸಲಿದ್ದೇವೆ. ಅಖಂಡವಾಗಿದ್ದ ಭಾರತ ಮತ್ತೆ ಭಾಗವಾಗದಿರಲಿ ಎಂದು ಹಾರೈಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಅಧ್ಯಕ್ಷರು, ಸಂಚಾಲಕರು, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ, ಶಿಕ್ಷಕೇತರ ವೃಂದ ಹಾಗೂ ಪೋಷಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿವೇಕಾನಂದ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ 75ಸ್ವಾತಂತ್ರ್ಯ ಹೋರಾಟಗಾರರ ಕುರಿತು ಲೇಖನವನ್ನು ಪುಸ್ತಕದ ಮೂಲಕ ಮುಖ್ಯ ಅತಿಥಿಗಳು ಬಿಡುಗಡೆ ಮಾಡಿದರು.
ವಿವೇಕಾನಂದ ಬಿ.ಎಡ್ ಶಿಕ್ಷಕ ವಿದ್ಯಾರ್ಥಿನಿಯರು ವಂದೇಮಾತರಂ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ಧ್ವಜಗೀತೆಯನ್ನು ಹಾಡಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಚಾಲಕ ಶ್ರೀ ರವಿನಾರಾಯಣ.ಎಂ ಸ್ವಾಗತಿಸಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸಂಧ್ಯಾ ವಂದಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಾಣಿಶ್ರೀ.ಎನ್ ಕಾರ್ಯಕ್ರಮ ನಿರೂಪಿಸಿದರು.
ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ದೀಪಕ್ ಇವರು ದೇಶಭಕ್ತಿಯ ಘೋಷಣೆಗಳನ್ನು ಹಾಕಿದರು. ಶಾಲೆಯ ಎನ್.ಸಿ.ಸಿ ಹಾಗೂ ಸ್ಕೌಟ್ಸ್ ವಿದ್ಯಾರ್ಥಿಗಳು ಅತಿಥಿಗಳಿಗೆ ಗೌರವ ಸಲ್ಲಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರು ಸಹಕರಿಸಿದರು.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

