ತುಳು ಬಾಷೆಗೆ ಮಾನ್ಯತೆ ಸಿಗಬೇಕು ಮತ್ತು ತುಳು ಭಾಷೆಯನ್ನು 8 ನೇ ಪರಿಚ್ಚೇದಕ್ಕೆ ಸೇರಿಸಬೇಕು ಎಂಬ ತುಳುವರ ಬೇಡಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಪೋಸ್ಟ್ ಕಾರ್ಡ್ ಮೂಲಕ ತಿಳಿಸುವ ವಿಭಿನ್ನ ಯೋಜನೆಯನ್ನು ತುಳುವೆರೆ ಕುಡ್ಲ (ರಿ) ತುಳು ಸಂಘಟನೆ ,ತುಳುನಾಡು ವಾರ್ತೆ ವಾರ ಪತ್ರಿಕೆ ಮತ್ತು ನಮ್ಮ ಟಿ.ವಿ ಸಹಯೋಗದಲ್ಲಿ ದಿ. 01.09.2022ನೇ ಗುರುವಾರ ತುಳುನಾಡಿನ ತುತ್ತ ತುದಿಯಾದ ಬೆಳ್ತಂಗಡಿ ತಾಲೂಕಿನ “ಬಂಜಾರು ಮಲೆ” ಎಂಬ ಪ್ರದೇಶದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಈ ಅಭಿಯಾನವು 1 ಲಕ್ಷಕ್ಕೂ ಅಧಿಕ ಪೋಸ್ಟ್ ಕಾರ್ಡ್ ತುಳುನಾಡಿನ ಜನತೆಯಿಂದ ಬರೆಯಿಸಿ ಕಳುಹಿಸುವ ಗುರಿಯನ್ನು ಹೊಂದಿದ್ದು. ಈಗಾಗಲೇ ಅಭಯಾನಕ್ಕೆ ಹಲವು ಸಂಘಟನೆಗಳ ಬೆಂಬಲ ದೊರೆತಿದೆ.
ಅಭಿಯಾನದ ಆಯೋಜಕರುಗಳು ತುಳುನಾಡಿನ ಎಲ್ಲಾ ರಾಜಕೀಯ, ಧಾರ್ಮಿಕ ಮತ್ತು ಎಲ್ಲಾ ಸಂಘಟನೆಗಳಿಗೆ ಈ ಅಭಿಯಾನದಲ್ಲಿ ನಮ್ಮೊಂದಿಗೆ ಕೈ ಜೋಡಿಸುವಂತೆ ವಿನಂತಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ 9845858594 ಮೊಬೈಲ್ ನಂಬರನ್ನು ಸಂಪರ್ಕಿಸಿ.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ