ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಧಾಕೃಷ್ಣ ಆಚಾರ್ (83 ವರ್ಷ) ನಿನ್ನೆ (31-08-2022) ಸಂಜೆ 5:30ಕ್ಕೆ ನಿಧನರಾದರು.
ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಮೂರು ದಶಕಗಳಿಗೂ ಮಿಕ್ಕಿ ವಿದ್ಯಾರ್ಥಿಗಳ ಅತ್ಯಂತ ಅಚ್ಚುಮೆಚ್ಚಿನ ಅರ್ಥಶಾಸ್ತ್ರದ ಉಪನ್ಯಾಸಕರಾಗಿ ಬಳಿಕ ಪೂರ್ಣಪ್ರಜ್ಞ ಸಂಧ್ಯಾಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ಸಲ್ಲಿಸಿದ್ದರು.
ಪ್ರಸ್ತುತ ಎಸ್.ವಿ.ಎಸ್.ಟಿ ಪ್ರೌಢಶಾಲೆ ಕಿದಿಯೂರು ಹಾಗೂ ಅಂಬಲಪಾಡಿ-ಕಿದಿಯೂರು ವಿದ್ಯಾಸಮುದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾಲಕರಾಗಿದ್ದರು. ವಿ.ಆರ್.ಕಿದಿಯೂರ್ ರವರು ಸ್ಥಾಪಿಸಿದ ಕಿದಿಯೂರು ನಾಗಲಕ್ಷ್ಮೀ ಶ್ರೀನಿವಾಸ ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯದರ್ಶಿಯಾಗಿ ಕಳೆದ ಎರಡು ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದರು.
ಅಲ್ಲದೆ ಹಲವಾರು ಸಾಮಾಜಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಪೂರ್ಣಪ್ರಜ್ಞ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಬಿ.ಎಂ. ಸೋಮಯಾಜಿ, ಕಾರ್ಯದರ್ಶಿ ತೇಜಸ್ವಿ ಶಂಕರ್, ಪ್ರಾಂಶುಪಾಲ ಡಾ. ಎ. ರಾಘವೇಂದ್ರ, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

