ಉಪ್ಪಿನಂಗಡಿ ರೋಟರಿ ಕ್ಲಬ್ ಸಭಾಂಗಣದಲ್ಲಿ ಶಿಕ್ಷಕ ದಿನಾಚರಣೆಯ ನಿಮಿತ್ತ ರಾಷ್ಟ್ರಪ್ರಶಸ್ತಿ ಪುರಸ್ಕೃತ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲ ರೋ.P H F ದಿವಾಕರ ಆಚಾರ್ಯ ಗೇರುಕಟ್ಟೆ, ಮಾಣಿ ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲಾ ಆಡಳಿತಾಧಿಕಾರಿ ಉಪ್ಪಿನಂಗಡಿ ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷ ರವೀಂದ್ರ ದರ್ಬೆ, ಉಪ್ಪಿನಂಗಡಿ ಮಾದರಿ ಶಾಲಾ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ವಂದನಾ ಮತ್ತು ಇಂದ್ರಪ್ರಸ್ಥ ವಿದ್ಯಾಲಯದ ಶಿಕ್ಷಕಿ ಶ್ರೀಮತಿ ಆಶಾಲತಾ ನಾಯಕ್ ಇವರನ್ನು ಗೌರವಿಸಲಾಯಿತು.
ರೋಟರಿ ಅಧ್ಯಕ್ಷ ಜಗದೀಶ್ ನಾಯಕ್, ಕಾರ್ಯದರ್ಶಿ ಗಿರಿಧರ ನಾಯಕ್, ಮಾಜಿ ಅಧ್ಯಕ್ಷರಾದ ಅಜೀಜ್ ಬಸ್ತಿ ಕಾರ್, ವಿಜಯಕುಮಾರ್ ಕಲ್ಲಳಿಕೆ, ನಿವೃತ್ತ ಬಿಎಸ್ಎಫ್ ಕಮಾಂಡೆಂಟ್ ರೋ. ಡಿ. ಸಿ .ಚಂದಪ್ಪ ಮೂಲ್ಯ, ಅಬೂಬಕ್ಕರ್ ಪುತ್ತ, ಇಸ್ಮಾಯಿಲ್ ಇಕ್ಬಾಲ್, ನಿಕಟ ಪೂರ್ವ ಕಾರ್ಯದರ್ಶಿ ನವೀನ್ ಬ್ರಾಗ್ಸ್, ಸ್ವರ್ಣೇಶ ಗಾಣಿಗ, ಮತ್ತು ಕ್ಲಬ್ಬಿನ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.
ಸನ್ಮಾನಿತರಾದ ನಾಲ್ವರು ಶಿಕ್ಷಕರು ಶಿಕ್ಷಕ ದಿನಾಚರಣೆಯ ಮಹತ್ವದ ಬಗ್ಗೆ ಮಾತನಾಡಿ ಗುರುವೃಂದದ ಮೇಲಿನ ಪ್ರೀತಿ ವಿಶ್ವಾಸಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.
ರೋಟರಿ ಕ್ಲಬ್ಬಿನ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಯೂನಿಕ್ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷ ಜಗದೀಶ್ ನಾಯಕ್ ಸ್ವಾಗತಿಸಿ ಕಾರ್ಯದರ್ಶಿ ಗಿರಿಧರ್ ನಾಯಕ್ ವಂದಿಸಿದರು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

