ಪುತ್ತೂರು: ಕೇರಳದ ಅತ್ಯಂತ ಹಳೆಯ ಹಾಗೂ ಸಾಂಪ್ರದಾಯಿಕ ಹಬ್ಬವಾದ ಓಣಂ ಈಗ ಶ್ರದ್ದೆ ಭಕ್ತಿಯಿಂದ ವಿಶ್ವದೆಲ್ಲೆಡೆ ಆಚರಿಸಲ್ಪಡುತ್ತಿದ್ದು ಇದೊಂದು ಕೇರಳಿಗರ ಪ್ರೀತಿಯ ಹಬ್ಬ ಎಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯ ರಿಂಗ್ ಎಂಡ್ ಟೆಕ್ನಾಲಜಿಯಯಲ್ಲಿ ನಡೆದ ಓಣಂ ಆಚರಣೆಯಲ್ಲಿ ವಿದ್ಯಾರ್ಥಿಗಳು ನಿರ್ಮಿಸಿದ ಬೃಹತ್ ಪೂಕಳಂನ ಮುಂಭಾಗದಲ್ಲಿ ದೀಪ ಬೆಳಗಿಸಿ ಮಾತಾಡಿದರು. ಮಹಾಬಲಿಯು ಪ್ರತಿವರ್ಷವೂ ಓಣಂ ಸಂದರ್ಭದಲ್ಲಿ ಭೂಮಿಗೆ ಮರಳಿ ಬಂದು ಜನರ ಕಷ್ಟಗಳನ್ನು ನಿವಾರಿಸುತ್ತಾನೆ ಎನ್ನುವ ನಂಬಿಕೆ ಇದೆ.
ಇದರಿಂದಾಗಿ ಈ ಹಬ್ಬವು ಅತ್ಯಂತ ಮಹತ್ವದ್ದಾಗಿದೆ. ವಿಷ್ಣುವಿನ ವಾಮನ ಅವತಾರದ ಐತಿಹ್ಯವನ್ನೂ ಇದು ತಿಳಿಸುತ್ತದೆ ಎಂದರು. ಓಣಂ ಎಲ್ಲರಿಗೂ ಶುಭವನ್ನು ತರಲಿ ಎಂದು ಹಾರೈಸಿದರು.
ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಸುಬ್ರಮಣ್ಯ ಭಟ್ ಅನೇಕತೆಯಲ್ಲಿ ಏಕತೆಯನ್ನು ಸಾರುವ ಇಂತಹ ಹಬ್ಬಗಳು ಎಲ್ಲೆಡೆಯೂ ಆಚರಿಸುವಂತಾಗಬೇಕು ಎಂದು ಶುಭ ಹಾರೈಸಿದರು.
ಓಣಂ ಹಬ್ಬದ ಹಿನ್ನೆಲೆಯನ್ನು ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪ್ರಸ್ತುತಪಡಿಸಿದರು. ಕೇರಳದ ಸಾಂಪ್ರದಾಯಿಕ ನೃತ್ಯ ತಿರುವತ್ತಿರ ಕಳಿಯನ್ನು ವಿದ್ಯಾರ್ಥಿನಿಯರು ಅಭಿನಯಿಸಿದರು.
ವಿದ್ಯಾರ್ಥಿಗಳಾದ ಸಿಬಿನ್ ರವೀಂದ್ರ ಸ್ವಾಗತಿಸಿ, ವರುಣ್ ವಂದಿಸಿದರು. ವಿಶ್ಮಿತಾ ಮತ್ತು ಭಾವನಾ ಕಾರ್ಯಕ್ರಮ ನಿರ್ವಹಿಸಿದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ