ಪುತ್ತೂರು, ಸೆ 15: ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕೆಮೆಸ್ಟ್ರಿ ಫೆಸ್ಟ್ ಪ್ರಯುಕ್ತ ಆಯೋಜಿಸಲಾದ ವಿವಿಧ ರೀತಿಯ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.
ಡಾಕ್ಯುಮೆಂಟರಿ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನವಿಭಾಗದ ಲಕ್ಷ್ಮಿ ಅರ್ಪಣ್ ಪ್ರಥಮ ಸ್ಥಾನ, ನಿಧಿ ಬೇಟೆ(ಟ್ರೇಷರ್ ಹಂಟ್) ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ದೀಪ್ತಿ ಲಕ್ಷ್ಮಿ ದ್ವಿತೀಯ ಸ್ಥಾನ,
ಸ್ಕ್ರಿಪ್ಟ್ ಬರವಣಿಗೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರತೀಕ್ಷಾ ಎ ಕೆ ದ್ವಿತೀಯ ಸ್ಥಾನ, ಪೋಟೊಗ್ರಾಫಿ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅದಿತ್ ಆಂಚನ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಐಸ್ ಬ್ರೇಕರ್ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಅಂಕಿತಾ ಎಂ, ಶಶಾಂಕ್ ವಿ ಎಸ್, ಯಶಸ್ ಜಿ, ಅಚಲ ಪಟೇಲ್, ಪ್ರತೀಕ್ಷಾ ಎ.ಕೆ, ಅನೀಶ್ ಪಜಿಮಣ್ಣು, ಲಕ್ಷ್ಮಿ ಅರ್ಪಣ್ , ನೇಹಾ ಭಟ್, ಮನಸ್ವಿ ಭಟ್, ಅದಿತ್ ಆಂಚನ್ , ಸಾತ್ವಿಕ ಎಂ, ಭಾರ್ಗವಿ ಬಿ ಎಸ್, ಅಂಜಲಿ ವಿ, ಅಶ್ವಿತ್ ರೈ ಎನ್, ಶ್ರುಜೇಶ್ ಕುಮಾರ್, ಪಿ.ಜಿ. ಅಯುಷ್ ರೈ, ಲಕ್ಷಿತ್, ದೀಪ್ತಿ ಲಕ್ಷ್ಮಿರವರ ತಂಡವು ತೃತೀಯ ಸ್ಥಾನವನ್ನು ಪಡೆದಿದೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

