ಪುತ್ತೂರು, ಸೆ 21 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎಂ ಪ್ರಥಮ ಸ್ಥಾನ ಪಡೆದಿದ್ದಾರೆ.
ಪ್ರಬಂಧ ಸ್ಪರ್ಧೆಯು ಸ್ವರಾಜ್ಯ ಆಂದೋಲನ ಮತ್ತು ರಾಷ್ಟ್ರಭಾವ ಜಾಗರಣ ವಿಷಯದ ಕುರಿತು ನಡೆದಿತ್ತು. ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸೆ.24 ರಂದು ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಈಸ್ಟ್ ವೆಸ್ಟ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಭಾಂಗಣದಲ್ಲಿ ನಡೆಯಲಿದೆ.
ಈಕೆ ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ
