ಪುತ್ತೂರು: ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಹೊರತರಲು ಇರುವ ಅವಕಾಶ ಸ್ಪರ್ಧೆಗಳು. ಆರೋಗ್ಯಕರ ಸ್ಪರ್ಧೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೂ ಅವಶ್ಯಕ. ಸೋಲು-ಗೆಲುವು- ಬಹುಮಾನ ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ, ಶುಭ ಹಾರೈಸಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಪ್ರಾಚಾರ್ಯೆ ಸುಚಿತ್ರಾ ಪ್ರಭು, ಉಪಪ್ರಾಚಾರ್ಯ ಗಣೇಶ್ ಪ್ರಸಾದ್ ಡಿ ಎಸ್ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಕನ್ನಡ ಉಪನ್ಯಾಸಕ ಸತೀಶ ಕೆ ಕಾರ್ಯಕ್ರಮ ನಿರೂಪಿಸಿದರು.
- ಗರ್ಭಪಾತದ ನಂತರ 3 ತಿಂಗಳ ಭ್ರೂಣವನ್ನು ಬಾತ್ರೂಮ್ ಕಿಟಕಿಯಿಂದ ಹೊರಗೆ ಎಸೆದ ಯುವತಿ
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7

