ವಿಶ್ವಶಾಂತಿ ಗಾಗಿ ಪ್ರಥಮ ನೊಬೆಲ್ ಪ್ರಶಸ್ತಿ ಪಡೆದ ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪಕರಾದ ಜೀನ್ ಹೆನ್ರಿ ಡ್ಯೂನಾಂಟ್ ಅವರ ಉದ್ದೇಶವನ್ನು ಅನುಷ್ಠಾನಗೊಳಿಸುವಲ್ಲಿ ವಿಶ್ವದ ಬಹುತೇಕ ರಾಷ್ಟ್ರಗಳು ಕಾರ್ಯೋನ್ಮುಖವಾಗಿದೆ. ಯುದ್ಧಕಾಲ, ನೈಸರ್ಗಿಕ ವಿಪತ್ತುಗಳು ಮತ್ತು ಮಾನವ ನಿರ್ಮಿತ ವಿಪತ್ತುಗಳ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ಪರಿಣಾಮಕಾರಿಯಾದ ಕ್ರಮಗಳಿಂದ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದೆ.
ಶಿಕ್ಷಣ ಸಂಸ್ಥೆಗಳಲ್ಲಿ ರೆಡ್ ಕ್ರಾಸ್ ಘಟಕಗಳನ್ನು ಸ್ಥಾಪಿಸುವ ಮೂಲಕ ಆರೋಗ್ಯ ,ಸೇವೆ ಮತ್ತು ಸ್ನೇಹ ಈ ಮೂರು ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳನ್ನು ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಿದೆ ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ದಿವಾಕರ ಆಚಾರ್ಯ ಗೇರುಕಟ್ಟೆ ತಿಳಿಸಿದರು.
ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜೂನಿಯರ್ ರೆಡ್ ಕ್ರಾಸ್ ಘಟಕ ಮತ್ತು ಡ್ರಗ್ ವಿರೋಧಿ ಕ್ಲಬ್ ಗಳನ್ನು ಅವರು ಉದ್ಘಾಟಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಸನ್ನಿ ಕೆ.ಎಂ ಮಾತನಾಡಿ ವಿದ್ಯಾರ್ಥಿಗಳು ಸಹಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನವನ್ನು ಮಾಡಿಕೊಳ್ಳಲು ಅವಕಾಶವಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಈ ಘಟಕಗಳನ್ನು ಉದ್ಘಾಟಿಸುತ್ತಿರುವುದು ವಿದ್ಯಾರ್ಥಿಗಳ ಹಿತಚಿಂತನೆಯಿಂದ ಎಂದು ಅವರು ತಿಳಿಸಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸದಾನಂದ ಉಂಗಿಲಬೈಲು ಮತ್ತು ಘಟಕದ ನಾಯಕಿ ಅಶ್ವಿತಾ ಉಪಸ್ಥಿತರಿದ್ದು ಶುಭ ಹಾರೈಸಿದರು.
ರೆಡ್ ಕ್ರಾಸ್ ಘಟಕದ ಚಟುವಟಿಕೆಯ ಅಂಗವಾಗಿ ಪ್ರಥಮ ಚಿಕಿತ್ಸೆಯ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಘಟಕದ ಸಂಯೋಜಕರಾದ ಪ್ರಶಾಂತ ಕುಮಾರ್ ಮತ್ತು ವಿದ್ಯಾರ್ಥಿ ವಿಲಾಸ್ ಹೆಗ್ಡೆ ನಡೆಸಿಕೊಟ್ಟರು.
ಉಪನ್ಯಾಸಕರಾದ ಶ್ರೀಮತಿ ಭಾರತಿ ಎಂ. ಯಲ್, ಶ್ರೀಮತಿ ಪಲ್ಲವಿ, ಹರೀಶ್ ರೈ ,ಪ್ರಕಾಶ್ ,ಜಯ ಪೂಜಾರಿ, ಸದಾನಂದ, ರಾಮಚಂದ್ರ, ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮದ ಆಯೋಜನೆಗೆ ಸಹಕರಿಸಿದರು.
ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ಕುಮಾರ್ ಸ್ವಾಗತಿಸಿ ಕುಮಾರಿ ತನ್ವಿಟಾ ಪಿಂಟೋ ವಂದಿಸಿದರು. ವಿದ್ಯಾರ್ಥಿ ಆದರ್ಶ ಕಾರ್ಯಕ್ರಮ ನಿರೂಪಿಸಿದರು.
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

