ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶವತಾರ ಯಕ್ಷಗಾನ ಮಂಡಳಿಯಲ್ಲಿ ಹಿಮ್ಮೇಳ ಕಲಾವಿದರಾಗಿ ಸೇವೆ ಸಲ್ಲಿಸುತ್ತಿರುವ ಯುವ ಮದ್ದಳೆಗಾರ ಚಿದಾನಂದ (31) ಅಕಾಲಿಕವಾಗಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಚಿದಾನಂದ ಅವರು ಕಳೆದ ಕೆಲವು ದಿನಗಳಿಂದ ಜಾಂಡೀಸ್ ಕಾಯಿಲೆಯಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಕಾಯಿಲೆ ಉಲ್ಬಣಗೊಂಡು ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾದರು.
ಚಿದಾನಂದರವರು ಜನಿಸಿದ್ದು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುದ್ಕುಳಿಯಲ್ಲಿ. ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ವಾಸವಾಗಿದ್ದರು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯಲ್ಲಿ 15 ವರ್ಷಕ್ಕೂ ಹೆಚ್ಚು ವರ್ಷಗಳ ಕಾಲ ಮದ್ದಳೆಗಾರರಾಗಿ ಸೇವೆ ಸಲ್ಲಿಸಿದ್ದ ಇವರು ಭಾಗವತಿಕೆ, ನಾಟ್ಯವನ್ನೂ ಬಲ್ಲವರು.
ಖ್ಯಾತ ಮದ್ದಳೆಗಾರರಾದ ಕುಮಾರ ಸುಬ್ರಹ್ಮಣ್ಯ ಭಟ್ ವಳಕ್ಕುಂಜ ಇವರ ಗರಡಿಯಲ್ಲಿ ಪಳಗಿದ್ದ ಚಿದಾನಂದ ಅವರು ಭರವಸೆಯ ಉದಯೋನ್ಮುಖ ಕಲಾವಿದರಾಗಿದ್ದರು.
ಅಕಾಲ ಮೃತ್ಯುವಶರಾದ ಚಿದಾನಂದ ಅವರು ಸಹೋದರ, ಸಹೋದರಿ ಮತ್ತು ಅನೇಕ ಯಕ್ಷಗಾನ ಅಭಿಮಾನಿಗಳನ್ನು ಅಗಲಿದ್ದಾರೆ.
- ಸಹಪಾಠಿಯೊಬ್ಬನ ಕಿರುಕುಳ ಮತ್ತು ಬ್ಲ್ಯಾಕ್ಮೇಲ್ನಿಂದ ಬೇಸತ್ತು ಯುವತಿ ಆತ್ಮಹತ್ಯೆ
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ

