ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದಾ ಪೂಜೆ, ಅಕ್ಷರಾಭ್ಯಾಸ ಮತ್ತು ಶಾಲಾ ವಾಹನ ಪೂಜೆ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 02.10.2022, ರವಿವಾರ ವೇದಮೂರ್ತಿ ಶ್ರೀ ಕಾರ್ತಿಕ್ ಶಾಸ್ತ್ರಿ ಮತ್ತು ಬಳಗದವರು ಶಾರದಾಪೂಜೆ, ಅಕ್ಷರಾಭ್ಯಾಸ ಮತ್ತು ಶಾಲಾ ವಾಹನ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.
ಸರಸ್ವತಿ ಪೂಜೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಶಿವಪ್ರಕಾಶ್ ಪೂಜಾ ಕಾರ್ಯದಲ್ಲಿ ಭಾಗವಹಿಸಿದರು. ನಂತರ ಶಾಲಾ ವಾಹನ ಪೂಜೆಯನ್ನು ನೆರವೇರಿಸಲಾಯಿತು.
ನಂತರ 50 ಪುಟಾಣಿಗಳು ಅಕ್ಷರಾಭ್ಯಾಸದ ಮೂಲಕ ತಮ್ಮ ಜ್ಞಾನಾರಂಭಕ್ಕೆ ಶುಭ ಮುಹೂರ್ತವಿರಿಸಿದರು. ಮಕ್ಕಳಿಗೆ ತಿಲಕ ಇಟ್ಟು ಆರತಿ ಎತ್ತಿ ಶಾರದ ಮಾತೆಗೆ ಪುಷ್ಪ ನಮನವನ್ನು ಸಲ್ಲಿಸಿದರು. ಶಾಲಾ ಶಿಕ್ಷಕಿಯರು ಶ್ರೀ ಲಲಿತಾಸಹಸ್ರನಾಮ ಪಠಣ ಮಾಡಿದರು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ