Wednesday, May 6, 2026
Homeಯಕ್ಷಗಾನಪದ್ಯಾಣ ಜಯರಾಮ ಭಟ್ ಮತ್ತು ಪುತ್ತು ನಾಯ್ಕ ಬಸಕೋಡಿ ಅವರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ -...

ಪದ್ಯಾಣ ಜಯರಾಮ ಭಟ್ ಮತ್ತು ಪುತ್ತು ನಾಯ್ಕ ಬಸಕೋಡಿ ಅವರಿಗೆ ಸರ್ಪಂಗಳ ಪ್ರಶಸ್ತಿ ಪ್ರದಾನ – ಅಕ್ಟೋಬರ್ 15, 2022ರಂದು ಕಲಾಪೋಷಕ ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ

ಹನ್ನೊಂದನೆಯ ವರ್ಷದ  ಸರ್ಪಂಗಳ  ಯಕ್ಷೋತ್ಸವ ಮತ್ತು  ಸರ್ಪಂಗಳ  ಪ್ರಶಸ್ತಿ ಪ್ರದಾನ ಸಮಾರಂಭವು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಅಕ್ಟೋಬರ್ 15, 2022 ರಂದು ರಾತ್ರಿ 9.00 ಗಂಟೆಗೆ ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ದಿವ್ಯೋಪಸ್ಥಿತಿಯಲ್ಲಿ ಜರಗಲಿದೆ.

ಸಂಜೆ 6.00 ರಿಂದ 11.00ರವರೆಗೆ ‘ಹನುಮೋದ್ಭವ ಮಾರಣಾಧ್ವರ’ ಯಕ್ಷಗಾನ ಪ್ರಸ್ತುತಗೊಳ್ಳಲಿದೆ.

2022ನೆಯ ಸಾಲಿನ‘ಸರ್ಪಂಗಳ ಸುಬ್ರಹ್ಮಣ್ಯ ಭಟ್‌ ಸ್ಮಾರಕ ಯಕ್ಷಗಾನ ಸಾಧಕ ಪ್ರಶಸ್ತಿ’ಯನ್ನು ಪಿ.ಟಿ. ಜಯರಾಮ ಭಟ್ ಅವರಿಗೆ ನೀಡಲಾಗುತ್ತಿದೆ. ಪ್ರಸಿದ್ಧ ಪದ್ಯಾಣ ಮನೆತನದ ಜಯರಾಮ ಭಟ್ಟರು ಸುಮಾರು ಮೂರು ದಶಕಗಳ ಕಾಲ ವಿವಿಧ ಮೇಳಗಳಲ್ಲಿ ಭಾಗವತರಾಗಿ, ಮದ್ದಲೆವಾದಕರಾಗಿ ತಿರುಗಾಟ ನಡೆಸಿದ ಅನುಭವ ಉಳ್ಳವರು.

ಈ ವರ್ಷದ‘ಸರ್ಪಂಗಳ ಕಲಾಸೇವಾ ಪುರಸ್ಕಾರ’ವನ್ನು ಕಟೀಲು ಮೇಳದಲ್ಲಿ ಸುಮಾರು ಐದು ದಶಕಗಳ ಕಾಲ ನೇಪಥ್ಯ ಕಲಾವಿದರಾಗಿ ಸೇವೆ ಸಲ್ಲಿಸಿದ ಪುತ್ತು ನಾಯ್ಕ ಬಸಕೋಡಿ ಇವರಿಗೆ ನೀಡಲಾಗುತ್ತಿದೆ.

ಅಂದು ಜರಗಲಿರುವ ಸಮಾರಂಭದಲ್ಲಿ ಪರ್ಯಾಯ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ‘ಸರ್ಪಂಗಳ  ಯಕ್ಷೋತ್ಸವ’ದ ಆಯೋಜಕರಾದ ಡಾ.ಶೈಲಜಾ ಎಸ್. ಮತ್ತು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected] 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments