Wednesday, May 6, 2026
Homeಸುದ್ದಿಕಥಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ ಮತ್ತು ಸುಶ್ಮಿತಾ ದ್ವಿತೀಯ

ಕಥಾ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ ಮತ್ತು ಸುಶ್ಮಿತಾ ದ್ವಿತೀಯ

ಪುತ್ತೂರು, ಅ 10:ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ ವತಿಯಿಂದ ಅಂಬಿಕಾ ಶಿಕ್ಷಣ ಸಂಸ್ಥೆಗಳ ಅವರಣದಲ್ಲಿ ಇತ್ತೀಚೆಗೆ ನಡೆದ 21ನೇ ಪುತ್ತೂರು ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ ಪದವಿ ಪೂರ್ವ ವಿಭಾಗದ ಕಥಾ ಸ್ಪರ್ಧೆಯಲ್ಲಿ

ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಕುಸುಮ ಸಿ. ಎನ್(ಕುಶಾಲನಗರದ ಹೆಬ್ಬಾಲೆಯ ಮಂಜು ನಾಯಕ್ ಮತ್ತು ಪವಿತ್ರ ದಂಪತಿ ಪುತ್ರಿ) ಪ್ರಥಮ ಸ್ಥಾನವನ್ನೂ

ಹಾಗೂ ಸುಶ್ಮಿತಾ ಬಿ.ಆರ್ (ಶಿವಮೊಗ್ಗದ ಹೊಸನಗರದ ರಾಘವೇಂದ್ರ ಬಿ ಪಿ ಮತ್ತು ಶ್ಯಾಮಲ ಭಟ್‌ ದಂಪತಿ ಪುತ್ರಿ) ದ್ವಿತೀಯ ಸ್ಥಾನ ಗಳಿಸಿರುತ್ತಾರೆ.


ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments