ಯಕ್ಷಮಿತ್ರ ಸೇವಾ ಬಳಗ ತಲಪಾಡಿ ಅರ್ಪಿಸುವ ಈ ಬಾರಿಯ ಅಂದರೆ 8 ನೆಯ ವರ್ಷದ ತಲಪಾಡಿ ಯಕ್ಷೋತ್ಸವವು ದಿನಾಂಕ 20-11-2022 ಆದಿತ್ಯವಾರ ಮಧ್ಯಾಹ್ನ 12 ರಿಂದ ರಾತ್ರಿ 9 ಗಂಟೆಯ ವರೆಗೆ ನಡೆಯಲಿದೆ.
ಈ ಕಾರ್ಯಕ್ರಮವು ಮಂಗಳೂರಿನ ರಾಮಕೃಷ್ಣ ಮಠದ ವಿವೇಕಾನಂದ ಸಭಾಂಗಣದಲ್ಲಿ ನಡೆಯಲಿದೆ. ತೆಂಕು-ಬಡಗು ತಿಟ್ಟುಗಳ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಪರೂಪದ ಪ್ರಸಂಗಗಳ ಪ್ರದರ್ಶನ ನಡೆಯಲಿದೆ.
ಮೊದಲನೇ ಪ್ರಸಂಗ ಸಮರಸೌಗಂಧಿಕಾ ಹಾಗೂ ಎರಡನೇ ಪ್ರಸಂಗ ‘ಬಬ್ರುವಾಹನ ಮತ್ತು ಶೇಷವಿಜಯ’ ಪಾತ್ರವರ್ಗ ಮತ್ತು ಕಲಾವಿದರ ವಿವರಗಳಿಗೆ ಆಹ್ವಾನಪತ್ರಿಕೆಯ ಚಿತ್ರವನ್ನು ನೋಡಿ.
ಈ ಅಪರೂಪದ ಪ್ರದರ್ಶನಗಳಿಗೆ ಯಕ್ಷಾಭಿಮಾನಿಗಳನ್ನು, ಯಕ್ಷಮಿತ್ರ ಸೇವಾ ಬಳಗದ ಸಂತೋಷ್ ಅಲಂಕಾರಗುಡ್ಡೆ ಹಾಗೂ ಎಲ್ಲಾ ಸದಸ್ಯರು ಆದರದಿಂದ ಆಮಂತ್ರಿಸಿದ್ದಾರೆ.
ಸಂತೋಷ್ ಅಲಂಕಾರಗುಡ್ಡೆ (8722369514)
ನಿಮ್ಮೂರಿನ ಸುದ್ದಿಗಳನ್ನು, ಸಮಸ್ಯೆಗಳನ್ನು ಪ್ರಕಟಿಸಬೇಕಾದಲ್ಲಿ ಫೋಟೋ ಸಮೇತ ಸುದ್ದಿಗಳನ್ನು ವಾಟ್ಸಾಪ್ ಮಾಡಿ – 9164828688 ಅಥವಾ ಈ-ಮೈಲ್ ಮಾಡಿ – [email protected]
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

