ಮುಳಿಯಾರು: ಯಕ್ಷತೂಣೀರ ಸಂಪ್ರತಿಷ್ಥಾನ ಕೋಟೂರು ಇದರ ಅಂಗಸಂಸ್ಥೆಯಾದ ಯಕ್ಷಬಳಗ ಮುಳಿಯಾರು ಇದರ ಸದಸ್ಯರಾದ ಪ್ರತಿಭಾನ್ವಿತ ವಿದ್ಯಾಥಿಗಳನ್ನು ಅಭಿನಂದಿಸಲಾಯಿತು.

ಯಸ್ ಯಸ್ ಯಲ್ ಸಿ ವಿದ್ಯಾರ್ಥಿಗಳಾದ ವಿಷ್ಣು ಯಂ ಮೂಡುಬಿದಿರೆ ಆಳ್ವಾಸ್ ಕಾಲೇಜ್, ಮನೀಶ್ ಕೆ, ಜಿ ವಿ ಯಚ್ ಯಸ್ ಯಸ್ ಕಾರಡ್ಕ, ದೀಕ್ಷಾ ಎ , ಎನ್ ಯಚ್ ಯಸ್ ಯಸ್ ಪೆರಡಾಲ, ಕವನ ಕೆ, ಯಸ್ ಎ ಪಿ ಯಚ್ ಯಸ್ ಯಸ್ ಅಗಲ್ಪಾಡಿ, ಪಿ ಯು ಸಿ ವಿದ್ಯಾರ್ಥಿನಿ ಸ್ತುತಿ ಕೆ, ಅಂಬಿಕಾ ಕಾಲೇಜ್ ಪುತ್ತೂರು ಇವರನ್ನು ಶಾಲು ಹೊದೆಸಿ ಫಲ ಸ್ಮರಣಿಕೆಯನ್ನಿತ್ತು ಅಭಿನಂದಿಸಲಾಯಿತು.
ಸಭಾಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಭಟ್ ಅಡ್ಕ ಅಧ್ಯಕ್ಷಸ್ಥಾನ ವಹಿಸಿದರು. ಗೋವಿಂದ ಬಳ್ಳಮೂಲೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಡಾ ಶಿವಕುಮಾರ್ ಅಡ್ಕ ಇವರು ಶುಭಹಾರೈಸಿದರು.

ಸನ್ಮಾನಿತರಾದ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ಅನಿಸಿಕೆಗಳನ್ನು ಹಂಚಿಕೊಂಡರು. ಕೃಷ್ಣ ಭಟ್ ಅಡ್ಕ ಸ್ವಾಗತಿಸಿ ಮುರಳಿ ಸ್ಕಂದ ಧನ್ಯವಾದವಿತ್ತರು.
ಪ್ರತಿಷ್ಠಾನದ ಸದಸ್ಯರಾದ ರಾಜೇಶ್ವರಿ ಈಶ್ವರ ಭಟ್ ಬಳ್ಳಮೂಲೆ, ವಿಜಯಲಕ್ಷ್ಮಿ ಸ್ಕಂದ, ಹರಿಕೃ಼ಷ್ಣ ಪೆರಡಂಜಿ ಉಪಸ್ಥಿತರಿದ್ದರು.
- ಆಫ್ರಿಕಾದ ದೂರದ ಹಳ್ಳಿಯೊಂದರಲ್ಲಿ ರೈತನೊಬ್ಬನಿಗೆ ಮಣ್ಣಿನಲ್ಲಿ ಚಿನ್ನ ಸಿಕ್ಕ ವಿಷಯ ವೈರಲ್, ಚಿನ್ನಕ್ಕಾಗಿ ಭಾರೀ ನೂಕುನುಗ್ಗಲು. ದೂರದೂರದಿಂದ ಜನರ ಆಗಮನ
- ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಹತ್ಯೆ: ಕೃತ್ಯದ ನಂತರವೂ ಮನೆಯಲ್ಲೇ ಉಳಿದು ‘ಯಾಬಾ’ ಸೇವಿಸಿದ್ದ ಆರೋಪಿಗಳು; ಬೆಚ್ಚಿಬೀಳಿಸುವ ವಿವರಗಳು ಬಹಿರಂಗ
- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್

