ದಿನಾಂಕ 23.10.2022ರ ಆದಿತ್ಯವಾರ ಪುತ್ತೂರಿನಲ್ಲಿ ಕೀರ್ತಿಶೇಷ ಖ್ಯಾತ ಯಕ್ಷಗಾನ ಭಾಗವತ ಗಾನಗಂಧರ್ವ ಪದ್ಯಾಣ ಗಣಪತಿ ಭಟ್ಟರ ಸಂಸ್ಮರಣೆ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಪದ್ಯಾಣ ಗಣಪತಿ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವೂ ಜರಗಲಿದೆ.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಈ ಬಾರಿಯ ಪದ್ಯಾಣ ಪ್ರಶಸ್ತಿಯನ್ನು ಖ್ಯಾತ ಭಾಗವತರಾದ ಶ್ರೀ ದಿನೇಶ ಅಮ್ಮಣ್ಣಾಯ ಮತ್ತು ಶ್ರೀ ಪುತ್ತಿಗೆ ರಘುರಾಮ ಹೊಳ್ಳರಿಗೆ ನೀಡಲಾಗುವುದು.
ಬೆಳಿಗ್ಗೆ 9.30 ಘಂಟೆಗೆ ಆರಂಭವಾಗಲಿರುವ ಈ ಕಾರ್ಯಕ್ರಮವು ರಾತ್ರಿಯ ವರೆಗೆ ನಡೆಯಲಿದೆ.
ಈ ದಿನದಲ್ಲಿ, ಪದ್ಯಾಣ ಸಂಸ್ಮರಣೆ ಮತ್ತು ಪದ್ಯಾಣ ಪ್ರಶಸ್ತಿ ಪ್ರದಾನ, ಮಾತು ಮಂಥನ, ಗಾನವೈಭವ, ಯಕ್ಷ ಸನ್ನಿವೇಶ, ಯಕ್ಷಗಾನ ಬಯಲಾಟ ‘ಕಂದರ್ಪ ವಿವಾಹ’ ಮೊದಲಾದ ಕಾರ್ಯಕ್ರಮಗಳು ಒಳಗೊಂಡಿವೆ.
ದಿನದ ಎಲ್ಲಾ ಕಾರ್ಯಕ್ರಮಗಳ ಸವಿವರಕ್ಕಾಗಿ ಕರಪತ್ರವನ್ನು (ಚಿತ್ರ) ನೋಡಿ.

- Changes to major ‘Sevas’ at Sri Kukke Subrahmanya Temple on September 3rd and 4th and September 6, 7
- ಸೆಪ್ಟಂಬರ್ 3 ಮತ್ತು 4 ಹಾಗೂ ಸೆಪ್ಟೆಂಬರ್ 6 ಮತ್ತು 7ರಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪ್ರಮುಖ ಸೇವೆಗಳಲ್ಲಿ ವ್ಯತ್ಯಾಸ
- “ಅನೂಪ್ ಜೊತೆ ನಾನು ಸುಮ್ಮನೆ ಹೊರಟುಹೋಗಲಿಲ್ಲ; ಅಖಿಲ್ ಅವರನ್ನು ಬಿಟ್ಟುಬರಲು ಒಂದು ಕಾರಣವಿದೆ,” ಎಂದು ಹೇಳಿದ ಮೇಘಾ ನಾಯರ್
- ನಟಿ ಅನುಶ್ರೀ ತಮ್ಮ ಸಾಕುನಾಯಿ ‘ಜೂಲಿ’ಯ ಸಾವಿಗೆ ಭಾವುಕ ಸಂದೇಶದ ಮೂಲಕ ಶ್ರದ್ಧಾಂಜಲಿ
- ದಮಯಂತಿ ಪುನಃ ಸ್ವಯಂವರ ಯಕ್ಷಗಾನ – ‘ದೊರಕದಿನ್ನದು ನಿನಗೆ.. 62 ಯೋಜನ ಹಿಂದೆ ಉಳಿದುದು..’ ಪದ್ಯದ ಪ್ರಯೋಗ ಮತ್ತು ಔಚಿತ್ಯ

