ಕಳೆದ ಒಂದು ತಿಂಗಳಿನಲ್ಲಿ 13 ಹಸುಗಳನ್ನು ಕೊಂದು ತಿಂದ ನಂತರ ಕೊನೆಗೂ ಹುಲಿಯನ್ನು ಹಿಡಿದ ಅರಣ್ಯಾಧಿಕಾರಿಗಳು
ಕಳೆದ ಒಂದು ತಿಂಗಳಿನಲ್ಲಿ 13 ಹಸುಗಳನ್ನು ಕೊಂದು ತಿಂದ ನಂತರ ಕೊನೆಗೂ ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆ ಹಿಡಿದಿದ್ದಾರೆ.
ಕಳೆದ ಒಂದು ತಿಂಗಳಿನಿಂದ ವಯನಾಡು ವನ್ಯಜೀವಿ ಅಭಯಾರಣ್ಯದ ವ್ಯಾಪ್ತಿಯಲ್ಲಿರುವ ಚೀರಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ಥಳೀಯ ನಿವಾಸಿಗಳಲ್ಲಿ ಭೀತಿ ಮೂಡಿಸಿದ್ದ ಹುಲಿಯನ್ನು ಇಂದು ಅರಣ್ಯಾಧಿಕಾರಿಗಳು ಬೋನು ಹಾಕಿ ಸೆರೆ ಹಿಡಿದಿದ್ದಾರೆ.
ಕಳೆದ ಒಂದು ತಿಂಗಳಲ್ಲಿ ಹುಲಿ 13 ಹಸುಗಳನ್ನು ಕೊಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸಾರ್ವಜನಿಕರಿಂದ ವ್ಯಾಪಕವಾಗಿ ದೂರುಗಳು ಬರತೊಡಗಿದ್ದುವು.
ಸರಕಾರಕ್ಕೆ ಜನರ ರಕ್ಷಣೆಗಿಂದ ಹುಲಿ, ಸಿಂಹ, ಬೀದಿನಾಯಿಗಳ ರಕ್ಷಣೆಯೇ ಮುಖ್ಯವೆಂದು ತೋರುತ್ತದೆ ಎಂದು ಸಾರ್ವಜನಿಕರು ವ್ಯಂಗ್ಯವಾಗಿ ಮಾತಾಡಿಕೊಳ್ಳುತ್ತಿದ್ದರು.
- ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?
- ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ
- ಸೆಪ್ಟೆಂಬರ್ 22ಕ್ಕೆ ಪಡುಬಿದ್ರಿಯಲ್ಲಿ ‘ನಾರಾಯಣ, ನರ-ನಾರಾಯಣ, ನಾಗಾಸ್ತ್ರ’ – ಅಮೋಘ ಯಕ್ಷಗಾನ ಪ್ರದರ್ಶನ
- ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಕೇಂದ್ರ ಸಮಿತಿಯ ಸಭೆ
- ಸೆಪ್ಟಂಬರ್ 28ಕ್ಕೆ ‘ವಿರಾಟಪರ್ವ’ ತಾಳಮದ್ದಳೆ – ಜಬ್ಬಾರ್, ವಾಟೆಪಡ್ಪು, ವಳಕ್ಕುಂಜ, ಕನ್ನಡಿಕಟ್ಟೆ, ಕಿರಣ್ ಕೆರೆ