ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸುತ್ತಿರುವ ವಿಶಿಷ್ಟ ಅರ್ಥಪೂರ್ಣ ಕಾರ್ಯಕ್ರಮ ‘ಅರ್ಥಾಂತರಂಗ’ 14ನೇ ಸರಣಿಯು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇಂದು (ದಿನಾಂಕ 30.10.2022ರಂದು) ನಡೆಯಲಿದೆ.
ಇಂದು ದಿನಾಂಕ 30.10.2022ರ ಆದಿತ್ಯವಾರ ಬೆಳಗ್ಗೆ 9 ಘಂಟೆಯಿಂದ ಆರಂಭವಾಗಲಿರುವ ಈ ‘ಅರ್ಥಾಂತರಂಗ – 14’ ಕಾರ್ಯಕ್ರಮದಲ್ಲಿ ‘ತಾಳಮದ್ದಳೆಯಲ್ಲಿ ಕರ್ಣಪರ್ವ’ ಎಂಬ ಬಗ್ಗೆ ಸಂವಾದ ನಡೆಯಲಿದೆ.
ಅರ್ಥಾಂತರಂಗ ಕಾರ್ಯಕ್ರಮವು ಈ ವರೆಗೆ 13 ಭಾಗಗಳನ್ನು ಕಂಡಿದೆ.
14ನೇ ಕಾರ್ಯಕ್ರಮವಾಗಿ ಖ್ಯಾತ ಪ್ರಸಂಗಕರ್ತೃ ಗೇರುಸೊಪ್ಪೆ ಶಾಂತಪ್ಪಯ್ಯ ಅವರ ‘ಕರ್ಣಪರ್ವ’ (ಕರ್ಣಾರ್ಜುನರ ಕಾಳಗ) ಪ್ರಸಂಗದ ಪ್ರಾತ್ಯಕ್ಷಿಕೆ ಸಹಿತ ಕಾರ್ಯಾಗಾರವನ್ನು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಆ ದಿನ ನಡೆಸಲಾಗುವುದು.
ಕಾರ್ಯಕ್ರಮದ ಸಂಪೂರ್ಣ ವಿವರಗಳಿಗೆ ಕಾರ್ಯಕ್ರಮದ ಆಹ್ವಾನಪತ್ರಿಕೆಯ ಚಿತ್ರಗಳನ್ನು ನೋಡಿ
- ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ
- 5 ವರ್ಷದ ಮಗುವಿಗೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿ ಬಂಧನ
- 60 ವರ್ಷದವರನ್ನು 25 ವರ್ಷದವರನ್ನಾಗಿ ಮಾಡುತ್ತೇನೆಂದು 35 ಕೋಟಿ ರೂಪಾಯಿ ವಂಚನೆ – ವಂಚಿಸಿದ ದಂಪತಿಗಾಗಿ ತೀವ್ರ ಹುಡುಕಾಟ
- ವಿಡಿಯೋ: ವಿಧಾನಸಭೆಯ ಮೂರನೇ ಮಹಡಿಯಿಂದ ಜಿಗಿದ ಮಹಾರಾಷ್ಟ್ರದ ಉಪ ಸ್ಪೀಕರ್ ನರಹರಿ ಜೀರ್ವಾಲ್ ಸುರಕ್ಷತಾ ಬಲೆಯೊಳಗೆ(ನೆಟ್) ಸಿಲುಕಿಕೊಂಡರು!
- ಶಿಕ್ಷಕ, ಪತ್ನಿ ಮತ್ತು ಇಬ್ಬರು ಮಕ್ಕಳು ಬರ್ಬರವಾಗಿ ಹತ್ಯೆ – ಬೆದರಿಕೆಯ ಬಗ್ಗೆ ತಿಂಗಳ ಹಿಂದೆಯೇ ದೂರು ನೀಡಿದ್ದರೂ ನಿರ್ಲಕ್ಷ್ಯ?