ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಢಿಕ್ಕಿ, ಚಾಲಕರಿಬ್ಬರಿಗೂ ಗಾಯ

ಧರ್ಮಸ್ಥಳ – ಸುಬ್ರಹ್ಮಣ್ಯ ಮಧ್ಯೆ ಬಿಳಿನೆಲೆಯಲ್ಲಿ ಕಾರು ಮತ್ತು ಜೀಪು ಪರಸ್ಪರ ಢಿಕ್ಕಿಯಾಗಿ, ಚಾಲಕರಿಬ್ಬರೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
ಜಿಲ್ಲೆಯ ಎರಡು ಪುಣ್ಯ ತೀರ್ಥಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಯ ಬಿಳಿನೆಲೆ ಎಂಬಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಇಂದು ಭಾನುವಾರ ಬೆಳಗ್ಗೆ ಈ ಅಪಘಾತ ನಡೆದಿದೆ ಎಂದು ವರದಿಯಾಗಿದೆ. ಜೀಪು ಸುಬ್ರಹ್ಮಣ್ಯ ಕಡೆಯಿಂದ ಕಡಬಕ್ಕೆ ಆಗಮಿಸುತ್ತಿತ್ತು.
ಹುಂಡೈ ಕಾರು ಸುಬ್ರಹ್ಮಣ್ಯಕ್ಕೆ ಹೋಗುತ್ತಿತ್ತು. ಬಿಳಿನೆಲೆ ಸೇತುವೆಯ ಸಮೀಪ ಪರಸ್ಪರ ಢಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡ ಇಬ್ಬರು ಚಾಲಕರನ್ನೂ ಆಸ್ಪತ್ರೆಗೆ ಸಾಗಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

- ನೇಪಾಳದಲ್ಲಿ ಹಠಾತ್ ಪ್ರವಾಹ: 133 ಭಾರತೀಯರು ನಾಪತ್ತೆ, 55 ಮಂದಿ ಸಾವು; ಬಿಹಾರ, ಯುಪಿ ಗಡಿಗಳಲ್ಲಿ ಕಟ್ಟೆಚ್ಚರ
- “ಹಿಜಾಬ್ ಇಸ್ಲಾಂಗೆ ಅನಿವಾರ್ಯವಲ್ಲ”: ಉತ್ತರ ಪ್ರದೇಶ ವಿದ್ಯಾರ್ಥಿನಿಯ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್.
- ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ, ಆದಿಸುಬ್ರಹ್ಮಣ್ಯ ದೇವಸ್ಥಾನದ ಅಂಗಣಕ್ಕೆ ನುಗ್ಗಿದ ನೀರು
- ಎಂಜಿನಿಯರ್ ಮತ್ತು ಅವರ ಕುಟುಂಬ ನದಿಗೆ ಹಾರಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ರೈಫಲ್ ಶೂಟಿಂಗ್ ಕೋಚ್ ವಿರುದ್ಧ ಆರೋಪ – ಲವ್ ಜಿಹಾದ್ ಶಂಕೆ
- ಬ್ಯಾರನ್ನನ್ನು ಎಲ್ಲಿ ಕೊಲ್ಲಬೇಕು”: ಟ್ರಂಪ್ ಅವರ ಪುತ್ರನ ತಲೆಗೆ 95 ಕೋಟಿ ರೂ. ಬಹುಮಾನ ಘೋಷಿಸಿದ ಇರಾನ್.

